alex Certify BIG NEWS: ಸಂಸದ ತೇಜಸ್ವಿ ಸೂರ್ಯಗೆ ದೋಸೆ ಪಾರ್ಸಲ್ ಕಳುಹಿಸಿದ ಕಾಂಗ್ರೆಸ್ ಕಾರ್ಯಕರ್ತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಸದ ತೇಜಸ್ವಿ ಸೂರ್ಯಗೆ ದೋಸೆ ಪಾರ್ಸಲ್ ಕಳುಹಿಸಿದ ಕಾಂಗ್ರೆಸ್ ಕಾರ್ಯಕರ್ತರು

ಬೆಂಗಳೂರು: ಭಾರಿ ಮಳೆಯಿಂದ ರಾಜಧಾನಿ ಬೆಂಗಳೂರಿನಲ್ಲಿ ಪ್ರವಾಹವುಂಟಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಗೆ ಸ್ಪಂದಿಸುವ ಬದಲು ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿಯುತ್ತಿದ್ದ ಬಿಜೆಪಿ ಸಂಸದ ತೆಜಸ್ವಿ ಸೂರ್ಯ ಅವರಿಗೆ ಬಗೆ ಬಗೆಯ ದೋಸೆಗಳನ್ನು ಕಾಂಗ್ರೆಸ್ ಪಾರ್ಸಲ್ ಕಳುಹಿಸಿದೆ.

ಬೆಂಗಳೂರಿನಲ್ಲಿ ಪ್ರವಾಹದಿಂದಾಗಿ ಜನರು ಪರದಾಡುತ್ತಿದ್ದರೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕ್ಷೇತ್ರದ ಜನರ ಸಂಕಷ್ಟಕ್ಕೂ ಸ್ಪಂದಿಸದೇ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿಯುತ್ತಾ ಬೆಂಗಳೂರು ವೆದರ್ ಗೆ ದೋಸೆ ತಿನ್ನಬೇಕೆಂಬ ಆಸೆಯಾಗಿದೆ ಎಂದು ಹೇಳುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಬಿಜೆಪಿ ಯುವ ಸಂಸದರ ಬೇಜವಾಬ್ದಾರಿಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕಾರ್ಯಕರ್ತರು ಸಂಸದ ತೇಜಸ್ವಿ ಸೂರ್ಯ ಅವರಿಗೆ ಮಸಾಲೆ ದೋಸೆ ಪಾರ್ಸಲ್ ಕಳುಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ವಿವಿಧ ಪ್ರಸಿದ್ಧ ಹೋಟೆಲ್ ಗಳಿಂದ ಮಸಾಲೆ ದೋಸೆ, ಸೆಟ್ ದೋಸೆ, ಈರುಳ್ಳಿ ದೋಸೆ, ಖಾಲಿ ದೋಸೆ ಸೇರಿದಂತೆ ಬಗೆ ಬಗೆಯ ದೋಸೆಗಳನ್ನು ತರಿಸಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಪಾರ್ಸಲ್ ಕಳುಹಿಸುವ ಮೂಲಕ ಸಂಸದರ ನಡೆ ಖಂಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...