alex Certify BIG NEWS: ಸಚಿವರ ತವರಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ; ಕಳಪೆ ಕಾಮಗಾರಿಗೆ 2 ದಿನದಲ್ಲಿ ಕಿತ್ತು ಬಂದ ರಸ್ತೆ ಡಾಂಬರು; ಗ್ರಾಮಸ್ಥರ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವರ ತವರಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ; ಕಳಪೆ ಕಾಮಗಾರಿಗೆ 2 ದಿನದಲ್ಲಿ ಕಿತ್ತು ಬಂದ ರಸ್ತೆ ಡಾಂಬರು; ಗ್ರಾಮಸ್ಥರ ಆಕ್ರೋಶ

ಮಂಡ್ಯ: ಸಚಿವ ಕೆ.ಸಿ.ನಾರಾಯಣಗೌಡ ಅವರ ತವರಲ್ಲೇ ಗುತ್ತಿಗೆದಾರನ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ರಸ್ತೆ ಡಾಂಬರೀಕರಣ ಮಾಡಿ ಮುಗಿಸಿದ 2 ದಿನಗಳಲ್ಲಿ ಡಾಂಬರು ಕಿತ್ತು ಬಂದಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ನಾಯನಹಳ್ಳಿಯಲ್ಲಿ ನಡೆದಿದೆ.

ಕಳಪೆ ರಸ್ತೆ ಕಾಮಗಾರಿಗೆ ಗ್ರಾಮಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವ ನಾರಾಯಣಗೌಡ ಅವರ ತವರಲ್ಲಿಯೇ ಈ ಘಟನೆ ನಡೆದಿದ್ದು, ನವೆಂಬರ್ 11ರಂದು ನಾಯನಹಳ್ಳಿ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಅಭಿವೃದ್ಧಿ ಹೆಸರಲ್ಲಿ ಗುತ್ತುಗೆದಾರ ಹಾಗೂ ಅಧಿಕಾರಿಗಳು ಕಳಪೆ ಕಾಮಗಾರಿ ಮಾಡಿ ಮುಗಿಸಿದ್ದಾರೆ. ಎರಡು ದಿನಗಳಲ್ಲೇ ರಸ್ತೆಯ ಡಾಂಬರು ಸಂಪೂರ್ಣವಾಗಿ ಕಿತ್ತು ಬಂದಿದೆ.

ಅಕ್ರಮದಲ್ಲಿ ಗುತ್ತಿಗೆದಾರನ ಜೊತೆ ಅಧಿಕಾರಿಗಳೂ ಶಾಮೀಲಾಗಿದ್ದು, ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...