alex Certify BIG NEWS: ಸಚಿವರ ಭದ್ರತೆಗೆ ತೆರಳುತ್ತಿದ್ದ DAR ವ್ಯಾನ್ ಪಲ್ಟಿ; ಮೂವರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವರ ಭದ್ರತೆಗೆ ತೆರಳುತ್ತಿದ್ದ DAR ವ್ಯಾನ್ ಪಲ್ಟಿ; ಮೂವರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ

ಕಾರವಾರ: ಸಚಿವರಿಗೆ ಭದ್ರತೆ ಒದಗಿಸಲು ತೆರಳುತ್ತಿದ್ದ ಡಿಎಆರ್ ವ್ಯಾನ್ ಪಲ್ಟಿಯಾಗಿ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಾರಗೋಡಿ ಗ್ರಾಮದಲ್ಲಿ ನಡೆದಿದೆ.

ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸಚಿವರಿಗೆ ಭದ್ರತೆ ಒದಗಿಸಲು ಡಿಎಆರ್ ವ್ಯಾನ್ ತೆರಳುತ್ತಿತ್ತು. ಈ ವೇಳೆ ತಾರಗೋಡಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾನ್ ರಸ್ತೆ ಬದಿಗೆ ಪಲ್ಟಿಯಾಗಿ ಬಿದ್ದಿದೆ.

ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದು, ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...