alex Certify BIG NEWS: ಸಚಿವ ಈಶ್ವರಪ್ಪ ವಜಾಗೆ ಆಗ್ರಹ; ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಸದಸ್ಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಈಶ್ವರಪ್ಪ ವಜಾಗೆ ಆಗ್ರಹ; ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಸದಸ್ಯರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಹೋರಾಟ ತೀವ್ರಗೊಳಿಸಿದ್ದು, ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿರುವ ಕೈ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಮಾಡಲು ಮುಂದಾಗಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು, ವಿಧಾನಸೌಧದ ಪಶ್ಚಿಮ ದ್ವಾರದಿಂದ ರಾಜಭವನಕ್ಕೆ ಕಾಲ್ನಡಿಗೆ ಜಾಥಾ ಆರಂಭಿಸಿದ್ದು, ರಾಷ್ಟ್ರದ್ರೋಹಿ ಈಶ್ವರಪ್ಪ ಅವರನ್ನು ವಜಾ ಮಾಡಬೇಕು. ಡೌನ್ ಡೌನ್ ಬಿಜೆಪಿ ಎಂಬ ಘೋಷಣೆಯೊಂದಿಗೆ ಕಾಂಗ್ರೆಸ್ ಸದಸ್ಯರು ರಾಜಭವನಕ್ಕೆ ತೆರಳಿದ್ದಾರೆ.

ಮತದಾರರಿಗೆ ನಕಲಿ ಚಿನ್ನದ ನಾಣ್ಯ ನೀಡಿ ಮತ ಕೋರಿದ ಅಭ್ಯರ್ಥಿ ಕಳ್ಳಾಟ ಬಯಲು..!

ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೆಳಗಿಳಿಸುವಂತೆ ಸದನದಲ್ಲಿ ಧರಣಿ ಮಾಡಿದೆವು, ಪ್ರತಿಭಟನೆಗಳನ್ನು ಮಾಡಿದೆವು. ಆದರೂ ರಾಜ್ಯ ಸರ್ಕಾರ ಸಚಿವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಹಾಗಾಗಿ ನೇರವಾಗಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಮಾಡಲಿದ್ದೇವೆ. ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸುತ್ತಿದ್ದೇವೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...