alex Certify BIG NEWS: ಸಚಿವ ಭೈರತಿ ಬಸವರಾಜರನ್ನು ಸಂಪುಟದಿಂದ ವಜಾಗೊಳಿಸಲಿ; ಕೆಂಡ ಕಾರಿದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಭೈರತಿ ಬಸವರಾಜರನ್ನು ಸಂಪುಟದಿಂದ ವಜಾಗೊಳಿಸಲಿ; ಕೆಂಡ ಕಾರಿದ ಸಿದ್ದರಾಮಯ್ಯ

ಬೆಳಗಾವಿ: ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಬಸವರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಇಲ್ಲವಾದರೆ ಸಿಎಂ ಬೊಮ್ಮಾಯಿ, ಸಂಪುಟದಿಂದ ವಜಾಗೊಳಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಮನ್ಸ್ ನೀಡಿದಾಗಲೇ ಭೈರತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಆದರೂ ರಾಜೀನಾಮೆ ನೀಡದೇ ಸಚಿವ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಸಚಿವರ ವಿರುದ್ಧ ಸಿಎಂ ಕ್ರಮ ಕೈಗೊಳ್ಳಬೇಕು ಎಂದರು.

ಭೈರತಿ ವಿರುದ್ಧ ಭೂ ಕಬಳಿಕೆ ಪ್ರಕರಣ ಸಂಬಂಧ ಸದನದಲ್ಲಿ ನಿಯಮ 60ರ ಅಡಿಯಲ್ಲಿ ಚರ್ಚೆಗೆ ಅವಕಾಶ ಕೇಳಿದ್ದೆವು. ಈ ಬಗ್ಗೆ ಕ್ರಮ ಬದ್ಧವಾಗಿ ನೋಟೀಸ್ ಕೊಟ್ಟಿದ್ದೆವು. ಆದರೆ ನಿಯಮ 60 ಅಡಿ ಕೇಳಿದರೆ ನಿಯಮ 69 ಅಡಿ ಚರ್ಚೆಗೆ ಅವಕಾಶ ಕೊಡುತ್ತಾರೆ ಇದನ್ನು ನಾವು ಒಪ್ಪುವುದಿಲ್ಲ. ಸಚಿವರು ಅಂದು ಖಾಲಿ ಪೇಪರ್ ಮೇಲೆ ಸಹಿ ಹಾಕಿಸಿಕೊಂಡು ಅಪರಾಧ ಒಳ ಸಂಚು ಮಾಡಿ ಅಣ್ಣಯ್ಯಪ್ಪ ಎಂಬುವವರ ಕಡೆಯಿಂದ ಸಹಿ ಪಡೆದು 2003ರ ಮೇನಲ್ಲಿ ವಿಭಾಗಪತ್ರ ಸೃಷ್ಟಿ ಮಾಡಿದ್ದಾರೆ. ಅದೇ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ. ಸಚಿವ ಭೈರತಿ, ಎಂ ಎಲ್ ಸಿ ಶಂಕರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಜನಪ್ರತಿನಿಧಿಗಳ ಕೋರ್ಟ್ ನಿಂದಲೂ ಆದೇಶ ಹೊರಡಿಸಲಾಗಿದೆ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...