alex Certify BIG NEWS: ಸಚಿವ ಸಂಪುಟ ವಿಸ್ತರಣೆ ವಿಚಾರ; ಅಮಿತ್ ಶಾ ರಾಜ್ಯಕ್ಕೆ ಬಂದಾಗಲೇ ತೀರ್ಮಾನ ಎಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಸಂಪುಟ ವಿಸ್ತರಣೆ ವಿಚಾರ; ಅಮಿತ್ ಶಾ ರಾಜ್ಯಕ್ಕೆ ಬಂದಾಗಲೇ ತೀರ್ಮಾನ ಎಂದ ಸಿಎಂ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸಂಜೆ ದೆಹಲಿ ಪ್ರವಾಸ ಕೈಗೊಂಡಿದ್ದು, ಸಿಎಂ ದೆಹಲಿ ಭೇಟಿ ವಿಚಾರದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

ದೆಹಲಿ ಪ್ರವಾಸದ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಇಂದು ಸಂಜೆ ದೆಹಲಿಗೆ ತೆರುಳಿತ್ತಿದ್ದೇನೆ. ಆದರೆ ಯಾವುದೇ ಕೇಂದ್ರ ಸಚಿವರನ್ನು,ನಾಯಕರನ್ನು ಭೇಟಿಯಾಗುತ್ತಿಲ್ಲ. ಸಂಪುಟ ವಿಸ್ತರಣೆ ವಿಚಾರ ಚರ್ಚಿಸಲು ದೆಹಲಿಗೆ ಹೋಗುತ್ತಿಲ್ಲ. ನಾಳೆ ನಡೆಯಲಿರುವ ಎಲ್ಲಾ ರಾಜ್ಯಗಳ ಸಿಎಗಳು, ಸಿಎಂ ಗಳ ಸಭೆಯಲ್ಲಿ ಭಾಗಿಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.

ಮೇ 3ರಂದು ಅಮಿತ್ ಶಾ ಅವರೇ ರಾಜ್ಯಕ್ಕೆ ಆಗಮಿಸಲಿದ್ದಾರೆ. ಆ ವೇಳೆ ಸಮಯ ತೆಗೆದುಕೊಂಡು ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ. ಸಚಿವ ಸ್ಥಾನ ತುಂಬುವ ಬಗ್ಗೆ ಈಗಾಗಲೇ ವರಿಷ್ಠರ ಗಮನಕ್ಕೆ ತರಲಾಗಿದೆ. ಹೀಗಾಗಿ ಅಮಿತ್ ಶಾ ಅವರು ಬಂದಾಗ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...