alex Certify BIG NEWS: ಸಚಿವ ಸುಧಾಕರ್ ನಿವಾಸಕ್ಕೆ ಕಾಂಗ್ರೆಸ್ ಮಾಜಿ ಸಂಸದರ ಭೇಟಿ; ಕುತೂಹಲ ಕೆರಳಿಸಿದ ಕೆ.ಎಚ್. ಮುನಿಯಪ್ಪ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಸುಧಾಕರ್ ನಿವಾಸಕ್ಕೆ ಕಾಂಗ್ರೆಸ್ ಮಾಜಿ ಸಂಸದರ ಭೇಟಿ; ಕುತೂಹಲ ಕೆರಳಿಸಿದ ಕೆ.ಎಚ್. ಮುನಿಯಪ್ಪ ನಡೆ

ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಇಂದು ಸಚಿವ ಕೆ. ಸುಧಾಕರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಅಸಮಾಧಾನ ಹೊಂದಿರುವ ಮುನಿಯಪ್ಪ ಬಹಿರಂಗವಾಗಿಯೇ ಇದನ್ನು ಹೇಳಿಕೊಂಡಿದ್ದರು. ಇದಾದ ಬಳಿಕ ಕಾಂಗ್ರೆಸ್ಸಿನ ಕೇಂದ್ರ ನಾಯಕರು ಮುನಿಯಪ್ಪ ಅವರನ್ನು ಭೇಟಿಯಾಗಿ ಸಮಾಧಾನಪಡಿಸುವ ಕಾರ್ಯ ಮಾಡಿದ್ದರು.

ಇದರ ಬೆನ್ನಲ್ಲೇ ಇಂದು ಸಚಿವ ಸುಧಾಕರ್ ನಿವಾಸಕ್ಕೆ ಕೆ.ಎಚ್. ಮುನಿಯಪ್ಪ ಭೇಟಿ ನೀಡಿದ್ದಾರೆ. ಈ ಮೊದಲು ಸಹ ಸುಧಾಕರ್ ಅವರನ್ನು ಭೇಟಿ ಮಾಡಿ ಮುನಿಯಪ್ಪ ಮಾತುಕತೆ ನಡೆಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...