alex Certify BIG NEWS: ಸಚಿವ ಸ್ಥಾನದಿಂದ ವಂಚಿತರಾದವರಲ್ಲಿ ನಾನೇ ಹಿರಿಯ ಶಾಸಕ; ಚುನಾವಣೆ ದೃಷ್ಟಿಯಿಂದ ಈ ಬಾರಿ ಮಂತ್ರಿ ಸ್ಥಾನ ಸಿಗುವ ನಿರೀಕ್ಷೆ; ಮನದಾಳದ ಮಾತು ಹಂಚಿಕೊಂಡ ಬಿಜೆಪಿ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಸ್ಥಾನದಿಂದ ವಂಚಿತರಾದವರಲ್ಲಿ ನಾನೇ ಹಿರಿಯ ಶಾಸಕ; ಚುನಾವಣೆ ದೃಷ್ಟಿಯಿಂದ ಈ ಬಾರಿ ಮಂತ್ರಿ ಸ್ಥಾನ ಸಿಗುವ ನಿರೀಕ್ಷೆ; ಮನದಾಳದ ಮಾತು ಹಂಚಿಕೊಂಡ ಬಿಜೆಪಿ ಶಾಸಕ

ಚಿತ್ರದುರ್ಗ: ಸಿಎಂ ಬಸವರಾಜ್ ಬೊಮ್ಮಾಯಿ ಇಂದಿನಿಂದ ಎರಡು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದು, ಇದರ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಮಂತ್ರಿ ಪಟ್ಟದ ಆಸೆ ಗರಿಗೆದರಿದೆ.

ಸಚಿವ ಸ್ಥಾನದಿಂದ ವಂಚಿತರಾದವರಲ್ಲಿ ನಾನೇ ಹಿರಿಯ ಶಾಸಕ ಎಂದು ಚಿತ್ರದುರ್ಗದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವುದರಿಂದ ಸಂಪುಟ ವಿಸ್ತರಣೆ ಮಾಡುವ ನಿರೀಕ್ಷೆ ಇದೆ. ಈ ಬಾರಿ ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ ಎಂದರು.

BIG NEWS: ಪ್ರಧಾನಿ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಲಿ; ಬಿಜೆಪಿ ನಾಯಕರು ಅವರ ಮೇಲ್ಪಂಕ್ತಿಯನ್ನು ಗೌರವಿಸಲಿ ಎಂದ HDK

ಗೃಹ ಸಚಿವ ಅಮಿತ್ ಶಾ, ರಾಜ್ಯಕ್ಕೆ ಭೇಟಿ ನೀಡಿ ಹೋದ ಬಳಿಕ ಸಂಪುಟ ವಿಸ್ತರಣೆ ವಿಚಾರ ಚರ್ಚೆಗೆ ಬಂದಿದೆ. ಏಪ್ರಿಲ್ 16, 17ರಂದು ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆಯಾಗಲಿದೆ. ನಮಗೂ ಸಚಿವ ಸ್ಥಾನ ಸಿಗಲಿದೆ ಎಂದು ಶಾಸಕ ಮಿತ್ರರು ಹೇಳಿದ್ದಾರೆ. ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಸಿಎಂ ಹಾಗೂ ಕೇಂದ್ರ ನಾಯಕರಿಗೆ ಬಿಟ್ಟ ವಿಚಾರ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...