alex Certify BIG NEWS: ಸದನಕ್ಕೆ ಹಾಜರಾದ ಈಶ್ವರಪ್ಪ; ರಮೇಶ್ ಜಾರಕಿಹೊಳಿ; ನಮಗೆ ಸಚಿವ ಸ್ಥಾನ ಸಿಗುವುದು ಖಚಿತ ಎಂದ ಮಾಜಿ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸದನಕ್ಕೆ ಹಾಜರಾದ ಈಶ್ವರಪ್ಪ; ರಮೇಶ್ ಜಾರಕಿಹೊಳಿ; ನಮಗೆ ಸಚಿವ ಸ್ಥಾನ ಸಿಗುವುದು ಖಚಿತ ಎಂದ ಮಾಜಿ ಸಚಿವ

ಬೆಳಗಾವಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಇಂದು ವಿಧಾನಸಭೆ ಕಲಾಪಕ್ಕೆ ಹಾಜರಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ಇಬ್ಬರು ಮಾಜಿ ಸಚಿವರಿಗೆ ಸಚಿವ ಸ್ಥಾನ ಸಿಗುವುದು ಖಚಿತ ಎನ್ನಲಾಗಿದೆ.

ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿದ್ದ ಕೆ.ಎಸ್.ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ, ಕಳೆದ ಬಾರಿಯ ವಿಧಾನಮಂಡಲ ಅಧಿವೇಶನಕ್ಕೂ ಹಾಜರಾಗದೇ ಕಲಾಪ ಬಹಿಷ್ಕರಿಸಿದ್ದರು. ಈಗ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಳೆದ ಮೂರು ದಿನಗಳಿಂದ ಕಲಾಪಕ್ಕೆ ಗೈರಾಗಿದ್ದ ಮಾಜಿ ಸಚಿವರಿಬ್ಬರೂ ಇಂದು ಸದನಕ್ಕೆ ಆಗಮಿಸುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಕಲಾಪಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ನಮ್ಮಿಬ್ಬರಿಗೆ ಸಚಿವ ಸ್ಥಾನ ನೀಡುವುದು ಅಂತಿಮವಾಗಿದೆ. ನನಗೆ, ರಮೇಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಸಿಗಲಿದೆ. ಇನ್ನೂ 4-5 ಜನರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ಬೊಮ್ಮಾಯಿ ನಿರ್ಧರಿಸಲಿದ್ದಾರೆ. ನಾನು ಹಾಗೂ ರಮೇಶ್ ಈಗಾಗಲೇ ಮಂತ್ರಿ ಸ್ಥಾನ ಅನುಭವಿಸಿದವರು. ಉಳಿದ ಮೂರು ತಿಂಗಳಲ್ಲಿ ನಾವು ಮಾಡುವುದು ಏನೂ ಇಲ್ಲ. ಆದರೆ ಮಂತ್ರಿಸ್ಥಾನ ನಮ್ಮಿಬ್ಬರಿಗೆ ಪ್ರತಿಷ್ಠೆಯ ವಿಷಯ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...