alex Certify BIG NEWS: ಸದನದಲ್ಲಿ ಚರ್ಚಿಸದೇ ವಿಧೇಯಕಗಳ ಅಂಗೀಕಾರ; ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸದನದಲ್ಲಿ ಚರ್ಚಿಸದೇ ವಿಧೇಯಕಗಳ ಅಂಗೀಕಾರ; ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅದರಲ್ಲಿಯೂ ವಿಧೇಯಕಗಳನ್ನು ಚರ್ಚಿಸದೇ ಅಂಗೀಕರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ವಿಧೇಯಕಗಳನ್ನು ಚರ್ಚಿಸದೇ ಅಂಗೀಕಾರ ಮಾಡಲಾಗುತ್ತಿದೆ. ಈ ಸರ್ಕಾರದಲ್ಲಿ ಕಳೆದ ಮೂರು ವರ್ಷಗಳಿಂದ ಇದೇ ರೀತಿ ನಡೆಯುತ್ತಿದೆ. ವಿಧೇಯಕಗಳ ಬಗ್ಗೆ ಗಂಭೀರವಾಗಿ ಚರ್ಚೆಯಾಗಬೇಕು. ಸದಸ್ಯರು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಬೇಕು. ಆದರೆ ಉತ್ತರವನ್ನೇ ಕೊಡದೇ ಗೊಂದಲ ಮೂಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದ್ದಾರೆ. ಈ ಧಾರ್ಮಿಕ ಹಕ್ಕು ಸ್ವಾತಂತ್ರ್ಯ ಗೊಂದಲದಲ್ಲಿದೆ. ಇದು ಧಾರ್ಮಿಕ ಹಕ್ಕು ಕಸಿಯುವ ವಿಧೇಯಕ. ಪರಿಚ್ಛೇದ 25, 28ರ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಧಾರ್ಮಿಕ ಹಕ್ಕುಗಳ ಉಲ್ಲಂಘನೆ ಇದರಲ್ಲಿದೆ. ಪ್ರತಿಯೊಬ್ಬರಿಗೂ ಧರ್ಮದ ಬಗ್ಗೆ ಸ್ವಾತಂತ್ರ್ಯವಿದೆ. ವಿಧೇಯಕದ ಬಗ್ಗೆ ಇರುವ ಗೊಂದಲಗಳಿಗೆ ಸರ್ಕಾರ ಉತ್ತರಿಸುತ್ತಿಲ್ಲ ಎಂದು ಕಿಡಿಕಾರಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...