alex Certify Big News: ಸಮಾಜವಾದಿ ಪಕ್ಷಕ್ಕೆ ಮತ್ತೊಂದು ಶಾಕ್;‌ ಪಕ್ಷ ತೊರೆಯಲು ಮುಂದಾದ ಮತ್ತೊಬ್ಬ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಸಮಾಜವಾದಿ ಪಕ್ಷಕ್ಕೆ ಮತ್ತೊಂದು ಶಾಕ್;‌ ಪಕ್ಷ ತೊರೆಯಲು ಮುಂದಾದ ಮತ್ತೊಬ್ಬ ನಾಯಕ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮುಖಭಂಗವನ್ನನುಭವಿಸಿದೆ. ಈ ಬಾರಿ ಅಧಿಕಾರದ ಗದ್ದುಗೆಗೇರುವುದು ಖಚಿತ ಎಂಬ ವಿಶ್ವಾಸದಲ್ಲಿದ್ದ ಅಖಿಲೇಶ್‌ ಸಿಂಗ್‌ ಯಾದವ್‌, ಪಕ್ಷದ ಪರಾಭವದ ಹಿನ್ನಲೆಯಲ್ಲಿ ಶಾಕ್‌ ಗೆ ಒಳಗಾಗಿದ್ದರು.

ಇದಾದ ಬಳಿಕವೂ ಸಮಾಜವಾದಿ ಪಕ್ಷಕ್ಕೆ ಹಿನ್ನಡೆಯಾಗುತ್ತಲೇ ಇದ್ದು, ಇತ್ತೀಚೆಗಷ್ಟೇ ಅಖಿಲೇಶ್‌ ಸಿಂಗ್‌ ಯಾದವ್‌ ಅವರ ಚಿಕ್ಕಪ್ಪ ಶಿವಪಾಲ್‌ ಯಾದವ್‌ ಸಮಾಜವಾದಿ ಪಕ್ಷದ ಜೊತೆಗಿನ ಮೈತ್ರಿ ತೊರೆದು ಬಿಜೆಪಿ  ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು.

ಇದೀಗ ಮತ್ತೊಂದು ಸುದ್ದಿ ಹೊರ ಬಿದ್ದಿದ್ದು, ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಆಜಂ ಖಾನ್‌, ಸಮಾಜವಾದಿ ಪಕ್ಷ ತೊರೆದು ಹೊಸ ಪಕ್ಷ ಕಟ್ಟಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಆಜಂ ಖಾನ್‌ ಸದ್ಯ ಜೈಲಿನಲ್ಲಿದ್ದು, ಶೀಘ್ರದಲ್ಲೇ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...