alex Certify BIG NEWS: ಸರ್ಕಾರದ ನಡವಳಿಕೆ ಸಂಶಯಕ್ಕೆ ಕಾರಣವಾಗಿದೆ; ಬಿಜೆಪಿ ಆಡಳಿತದಿಂದ ಜನ ಬೇಸತ್ತಿದ್ದಾರೆ; HDK ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರದ ನಡವಳಿಕೆ ಸಂಶಯಕ್ಕೆ ಕಾರಣವಾಗಿದೆ; ಬಿಜೆಪಿ ಆಡಳಿತದಿಂದ ಜನ ಬೇಸತ್ತಿದ್ದಾರೆ; HDK ವಾಗ್ದಾಳಿ

ಮೈಸೂರು: ವೋಟರ್ ಐಡಿ ಪರಿಷ್ಕರಣೆ ಹೆಸರಲ್ಲಿ ಅಧಿಕಾರಿಗಳಿಂದಲೇ ಅಕ್ರಮ ನಡೆಯುತ್ತಿದೆ. ಸರ್ಕಾರಿ ಅಧಿಕಾರಿಗಳು ಎಂದು ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಸರ್ಕಾರದ ನಡವಳಿಕೆಯಿಂದ ಎಲ್ಲರೂ ಸಂಶಯಪಡುವಂತಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ,.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದ ಜನತೆ ಬಿಜೆಪಿ ದುರಾಡಳಿತದಿಂದ ಬೇಸತ್ತಿದ್ದಾರೆ. ಈ ಬಾರಿ ಬಿಜೆಪಿ ಏನೇ ಮಾಡಿದರೂ ಅಧಿಕಾರಕ್ಕೆ ಬರಲ್ಲ. ಕುತಂತ್ರದಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು.

ಗುಂಬಜ್ ಮಾದರಿಯ ಶೆಲ್ಟರ್ ನಿರ್ಮಾಣ ವಿವಾದ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಶಾಸಕರೇ ಕಣ್ಣೀರು ಹಾಕುತ್ತಿದ್ದಾರೆ ಎಂದ ಮೇಲೆ ಜನರ ಗತಿಯೇನು? ಸ್ವಪಕ್ಷದ ಸಂಸದರೇ ಶಾಸಕರಿಗೆ ಕಿರುಕುಳ ನೀಡುತ್ತಿದ್ದಾರೆ ಇನ್ನು ಅವರಿಗೆ ಮತ ಹಾಕಿದ ಮತದಾರರ ಗತಿ ಏನಾಗಬೇಕು ಎಂದು ಕಿಡಿಕಾರಿದರು.

ಇಂದಿನಿಂದ ಪಂಚರತ್ನ ಯಾತ್ರೆ ನಡೆಯಲಿದೆ. ಇಂದಿನಿಂದ 36 ದಿನಗಳ ಕಾಲ ಮೊದಲ ಹಂತದ ಪಂಚರತ್ನ ರಥ ಯಾತ್ರೆ ನಡೆಯಲಿದೆ. ಮಳೆಯಿಂದಾಗಿ ಪಂಚರತ್ನ ರಥ ಯಾತ್ರೆ ಮುಂದೂಡಲಾಗಿತ್ತು. ಇಂದಿನಿಂದ ಆರಂಭವಾಗಲಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...