alex Certify BIG NEWS: ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಹೇಳಿ ಉದ್ಯಮಿ ಮಗನ ಅಪಹರಣ; 4 ಕೋಟಿ ಹಣಕ್ಕೆ ಬೇಡಿಕೆ; ಖತರ್ನಾಕ್ ಮಹಿಳೆಯ ಗ್ಯಾಂಗ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಹೇಳಿ ಉದ್ಯಮಿ ಮಗನ ಅಪಹರಣ; 4 ಕೋಟಿ ಹಣಕ್ಕೆ ಬೇಡಿಕೆ; ಖತರ್ನಾಕ್ ಮಹಿಳೆಯ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಸರ್ಕಾರದ ಟೆಂಡರ್ ಕೊಡಿಸುವುದಾಗಿ ಹೇಳಿ ಕರೆದು ಉದ್ಯಮಿ ಮಗನನ್ನು ಅಪಹರಿಸಿ 4 ಕೋಟಿ ರೂಪಾಯಿ ಹಣಕ್ಕೆ ಮಹಿಳೆಯ ಗ್ಯಾಂಗ್ ಬೇಡಿಕೆಯಿಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಉದ್ಯಮಿ ರವಿ ಎಂಬುವವರ ಪುತ್ರ ಸೂರಜ್ ಎಂಬಾತನನ್ನು ಟೆಂಡರ್ ಕೊಡಿಸುವುದಾಗಿ ಕರೆಸಿಕೊಂಡ ಮಹಿಳೆಯ ಗ್ಯಾಂಗ್, ಸೂರಜ್ ಅವರಿಗೆ ಪಿಸ್ತೂಲ್ ತೋರಿಸಿ ಹಲ್ಲೆ ನಡೆಸಿ ಬಳಿಕ ಅವರನ್ನು ಕಿಡ್ನ್ಯಾಪ್ ಮಾಡಿದೆ.

4 ಕೋಟಿ ರೂಪಾಯಿ ನೀಡುವಂತೆ ಹಣಕ್ಕೆ ಬೇಡಿಕೆ ಇಟ್ಟಿದೆ. ಹಣ ನೀಡದಿದ್ದರೆ ರೇಪ್ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿದೆ. ನನ್ನ ಬಳಿ ಅಷ್ಟು ಹಣವಿಲ್ಲ ಬಿಟ್ಟು ಬಿಡಿ ಎಂದು ಸೂರಜ್ ಹೇಳಿದ್ದಾನೆ. ಆದರೂ ಬಗ್ಗದ ಗ್ಯಾಂಗ್, 25 ಲಕ್ಷ ನೀಡುವಂತೆ ಒತ್ತಾಯಿಸಿದ್ದು, ಸೂರಜ್ ತನ್ನ ಸ್ನೇಹಿತ ಗುರುಮೂರ್ತಿಗೆ ಹೇಳಿ 25 ಲಕ್ಷ ಹಣ ತರಿಸಿಕೊಟ್ಟಿದ್ದಾರೆ.

ಮಗನನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂದು ಉದ್ಯಮಿ ಬ್ಯಾಟರಾಯನಪುರ ಠಾಣೆಗೆ ದೂರು ನೀಡಿದ್ದು, ಸಧ್ಯ ಪೊಲೀಸರು ಮಹಿಳೆ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುಷ್ಪಾ, ಅಯ್ಯಪ್ಪ, ರಾಕೇಶ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...