alex Certify BIG NEWS: ಸವಾಲುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳುತ್ತೇನೆ; ಬಡವರ, ರೈತರ ಕಣ್ಣೀರೊರೆಸುವೆ; ನೂತನ ಸಿಎಂ ಬೊಮ್ಮಾಯಿ ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸವಾಲುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳುತ್ತೇನೆ; ಬಡವರ, ರೈತರ ಕಣ್ಣೀರೊರೆಸುವೆ; ನೂತನ ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಬಸವರಾಜ್ ಬೊಮ್ಮಾಯಿ, ನಮ್ಮ ಮುಂದೆ ಹಲವು ಸವಾಲುಗಳಿವೆ ಎಲ್ಲವನ್ನೂ ಎದುರಿಸಿ ಯಶಸ್ಸು ಕಾಣುತ್ತೇನೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಳೆದ ಒಂದುವರೆ ವರ್ಷದಿಂದ ರಾಜ್ಯ ಕೋವಿಡ್ ಸಂಕಷ್ಟದಲ್ಲಿದೆ. ಎರಡು ವರ್ಷಗಳಿಂದ ಜನ ಪ್ರವಾಹ ತೊಂದರೆಗಳಿಗೆ ಸಿಲುಕಿ ಸಂಕಷ್ಟಕ್ಕೀಡಾಗಿದ್ದಾರೆ. ಆರ್ಥಿಕ, ಸಾಮಾಜಿಕ ಸೇರಿದಂತೆ ಎಲ್ಲಾ ರೀತಿಯ ಸವಾಲುಗಳು ನನ್ನ ಮುಂದಿದೆ. ಸವಾಲುಗಳನ್ನು ಮೆಟ್ಟಿಲನ್ನಾಗಿ ಮಾಡಿಕೊಂಡು ಎಲ್ಲರ ಸಹಕಾರದಿಂದ ಎದುರಿಸಿ ಯಶಸ್ಸು ಸಾಧಿಸುತ್ತೇನೆ ಎಂಬ ವಿಶ್ವಾಸವಿದೆ ಎಂದರು.

ಭಾರತ-ಶ್ರೀಲಂಕಾ ಟಿ-20: ಹಾರ್ದಿಕ್ ಪಾಂಡ್ಯ, ಪೃಥ್ವಿ ಶಾ ಸೇರಿ 9 ಆಟಗಾರರು ಹೊರಕ್ಕೆ

ನಾನು ಸಿಎಂ ಎನ್ನುವುದಕ್ಕಿಂತ ಎಲ್ಲರಂತೆ ನೂನೂ ಕೂಡ ಒಬ್ಬನೆಂದು ಕೆಲಸ ಮಾಡುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಒಗ್ಗಟ್ಟಿನಿಂದ ಕರೆದುಕೊಂಡು ಸಾಗುತ್ತೇನೆ. ರಾಜ್ಯದ ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆ. ಬಡವರು, ರೈತರ ಕಣ್ಣೀರು ಒರೆಸಿ ಅವರ ಸಂಕಷ್ಟಗಳನ್ನು ನಿವಾರಿಸುತ್ತೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...