alex Certify BIG NEWS: ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಗಳು ಅನ್ವಯ; ಹೊಸ ಗೈಡ್ ಲೈನ್ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಗಳು ಅನ್ವಯ; ಹೊಸ ಗೈಡ್ ಲೈನ್ ಪ್ರಕಟ

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೂ ರಾಜ್ಯ ಸರ್ಕಾರ ಈ ಬಾರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಈ ಬಾರಿ 5 ದಿನಗಳ ಕಾಲ ಸರಳವಾಗಿ ಗಣೇಶೋತ್ಸವ ಆಚರಿಸಲು ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ ಎಂದರು.

* ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಬಿಎಂಪಿ, ಜಿಲ್ಲಾಡಳಿತದ ಅನುಮತಿ ಕಡ್ಡಾಯ

* ಪರಿಸರಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಾತ್ರ ಅವಕಾಶ

* ಸರ್ಕಾರಿ ಹಾಗೂ ಖಾಲಿ ಜಾಗಗಳಲ್ಲಿ 5 ದಿನಗಳ ಕಾಲ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ

* ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ವ್ಯಾಕ್ಸಿನೇಷನ್ ಅಭಿಯಾನ

* ನಗರ ಪ್ರದೇಶಗಳಲ್ಲಿ ವಾರ್ಡ್ ಗೆ 1ರಂತೆ ಮೂರ್ತಿ ಪ್ರತಿಷ್ಠಾಪಿಸಬಹುದು

* ಗ್ರಾಮೀಣ ಅಥವಾ ಹಳ್ಳಿಗಳಲ್ಲಿ ಸ್ಥಳೀಯಾಡಳಿತದಿಂದ ನಿರ್ಧಾರ

* 50X50 ವಿಸ್ತೀರ್ಣದ ಅಳತೆ ಪೆಂಡಾಲ್ ನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

* ಯಾವುದೇ ಸಾಂಸ್ಕೃತಿಕ, ಡಿಜೆ ಕಾರ್ಯಕ್ರಮಕ್ಕೆ ಅವಕಾಶವಿಲ್ಲ

* ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೆರವಣಿಗೆ, ವಾದ್ಯಗಳಿಗೆ ನಿರ್ಬಂಧ

* ನಿಗದಿತ ಸದಸ್ಯರಿಂದ ಮಾತ್ರ ನಿಗದಿತ ಸ್ಥಳಗಳಲ್ಲಿ ವಿಸರ್ಜನೆ

* ಗಡಿ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇದ್ದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಥಾಪನೆಗೆ ಅವಕಾಶ

* ಯಾವುದೇ ಶಾಲಾ-ಕಾಲೇಜುಗಳಲ್ಲಿ ಗಣಪತಿ ಕೂರಿಸುವಂತಿಲ್ಲ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...