alex Certify BIG NEWS: ಸಾವರ್ಕರ್ ಜೊತೆಗೆ ಟಿಪ್ಪು ಫೋಟೋ ಕೂಡ ಹಾಕಬೇಕಿತ್ತು; ಬಿಜೆಪಿಯವರದ್ದೇ ಇದೆಲ್ಲ ಕಿತಾಪತಿ; ಕಿಡಿ ಕಾರಿದ ಮಾಜಿ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾವರ್ಕರ್ ಜೊತೆಗೆ ಟಿಪ್ಪು ಫೋಟೋ ಕೂಡ ಹಾಕಬೇಕಿತ್ತು; ಬಿಜೆಪಿಯವರದ್ದೇ ಇದೆಲ್ಲ ಕಿತಾಪತಿ; ಕಿಡಿ ಕಾರಿದ ಮಾಜಿ ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ ದಿನಾಚರಣೆ ದಿನದಂದು ಶಿವಮೊಗ್ಗದಲ್ಲಿ ನಡೆದ ಗಲಭೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾವರ್ಕರ್ ಜೊತೆಗೆ ಟಿಪ್ಪು ಫೋಟೋ ಕೂಡ ಹಾಕಬೇಕಿತ್ತು. ಇದೆಲ್ಲ ಕಿತಾಪತಿ ಮಾಡುವುದು ಬಿಜೆಪಿಯವರೇ ಈಗ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಗಲಭೆಗೂ ಕಾಂಗ್ರೆಸ್ಸಿಗೂ ಏನು ಸಂಬಂಧ. ಈಶ್ವರಪ್ಪ ಬುದ್ಧಿ ಸರಿ ಇಲ್ಲದೆ ಏನೇನೋ ಮಾತನಾಡುತ್ತಿದ್ದಾರೆ. ಸಾಮರಸ್ಯ ಕಾಪಾಡಿಕೊಂಡು ಹೋಗಬೇಕಾದ್ದು ಎಲ್ಲರ ಜವಾಬ್ದಾರಿ ಎಂದರು.

ಕೋಮು ಸಂಘರ್ಷವನ್ನು ಹುಟ್ಟುಹಾಕಿ, ಲಾಭ ಪಡೆಯಲು ಬಿಜೆಪಿ ಪ್ರಯತ್ನಿಸುತ್ತದೆ ಎಂದು ಹೇಳಿದ ಸಿದ್ದರಾಮಯ್ಯ, ಶಿವಮೊಗ್ಗದ ಗಲಾಟೆಗೆ ಸಂಬಂಧಿಸಿದಂತೆ ವೃಥಾ ಕಾಂಗ್ರೆಸ್ ನವರ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...