alex Certify BIG NEWS: ಸಿಎಂ ಬದಲಾವಣೆ ಚರ್ಚೆ; ಮೌನಕ್ಕೆ ಶರಣಾದ ಸುತ್ತೂರು ಶ್ರೀಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬದಲಾವಣೆ ಚರ್ಚೆ; ಮೌನಕ್ಕೆ ಶರಣಾದ ಸುತ್ತೂರು ಶ್ರೀಗಳು

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವದಂತಿಗಳು ದಿನದಿಂದ ದಿನಕ್ಕೆ ಕುತೂಹಲವುಂಟು ಮಾಡುತ್ತಿದ್ದು, ರಾಜ್ಯದ ಬಹುತೇಕ ಮಠಾಧೀಶರು ಸಿಎಂ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, ಸುತ್ತೂರು ಶ್ರೀಗಳು ಮಾತ್ರ ಮೌನಕ್ಕೆ ಶರಣಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಬಹುತೇಕ ಮಠಾಧೀಶರು ಸಿಎಂ ಬಿ.ಎಸ್.ವೈ. ಪರವಾಗಿ ಮಾತನಾಡಿದ್ದು, ಸಿಎಂ ಬದಲಾವಣೆ ಮಾಡಬಾರದು ಎಂದು ಹೈಕಮಾಂಡ್ ಗೆ ಸಂದೇಶ ರವಾನಿಸಿದ್ದಾರೆ. ಆದರೆ ಸುತ್ತೂರು ಶ್ರೀಗಳು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಹಿಸಿದ್ದಾರೆ.

ಹಣ ಗಳಿಸಲು ಯೂಟ್ಯೂಬ್‌ ನಿಂದ ಬಂಪರ್‌ ಅವಕಾಶ

ಮೈಸೂರು ಸುತ್ತೂರು ಮಠ ಕೆಲದಿನಗಳ ಹಿಂದೆ ಶಕ್ತಿ ಕೇಂದ್ರವಾಗಿ ಪರಿಣಮಿಸಿತ್ತು. ಸಚಿವರು, ಶಾಸಕರು, ಬಂಡಾಯ ನಾಯಕರು ಭೆಟಿ ನೀಡಿದ್ದರು. ಸಚಿವ ಸಿ.ಪಿ. ಯೋಗೇಶ್ವರ್, ಪ್ರಹ್ಲಾದ್ ಜೋಶಿ, ಅರವಿಂದ್ ಬೆಲ್ಲದ್, ಬಸವರಾಜ್ ಬೊಮ್ಮಾಯಿ, ಆರ್. ಅಶೋಕ್ ಹೀಗೆ ಹಲವು ನಾಯಕರು ಶ್ರೀಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದೀಗ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆದಿದ್ದರೂ ಸುತ್ತೂರು ಶ್ರೀ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದಿರುವುದು ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...