alex Certify BIG NEWS: ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ; ಈ ಚರ್ಚೆಯನ್ನು ಇಲ್ಲಿಗೆ ನಿಲ್ಲಿಸಿ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ; ಈ ಚರ್ಚೆಯನ್ನು ಇಲ್ಲಿಗೆ ನಿಲ್ಲಿಸಿ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಆರಂಭವಾಗಿದ್ದ ಚರ್ಚೆಗೆ ತೆರೆ ಎಳೆದಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಸತ್ಯಾಂಶವಿಲ್ಲ. ಅಂತಹ ಯಾವುದೇ ವಿಚಾರವೂ ಬಿಜೆಪಿಯಲ್ಲಿ ನಡೆದಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಕುಟುಂಬ ಸಮೇತವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದೇವೆ. ರಾಯರ ದರ್ಶನ ಪಡೆದು ನಾಳೆ ವಾಪಸ್ ಆಗುತ್ತಿದ್ದೇವೆ. ಬಳಿಕ ರಾಜ್ಯ ಪ್ರವಾಸದ ಸಿದ್ಧತೆ ಆರಂಭಿಸುವುದಾಗಿ ತಿಳಿಸಿದರು.

ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಾಯಕರ ಟ್ವೀಟ್ ಹಾಗೂ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಅದರಲ್ಲಿ ಯಾವುದೇ ಗೊಂದಲಗಳೂ ಇಲ್ಲ. ರಾಜ್ಯ ಬಿಜೆಪಿಯಲ್ಲಾಗಲಿ ಹೈಕಮಾಂಡ್ ಮಟ್ಟದಲ್ಲಾಗಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚಿಂತನೆ ನಡೆದಿಲ್ಲ. ಸಿಎಂ ಬದಲಾವಣೆ ಎಂಬ ಚರ್ಚೆ ಕೇವಲ ವದಂತಿಯಷ್ಟೇ ಎಂದರು.

ಅಮಿತ್ ಶಾ ಅವರನ್ನು ಭೇಟಿಯಾದಾಗಲೂ ಅಂತಹ ಯಾವ ವಿಚಾರ ಚರ್ಚೆಗೆ ಬಂದಿಲ್ಲ. ವಿಧಾನಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಬಸವರಾಜ್ ಬೊಮ್ಮಾಯಿ ಅವರೇ ಪೂರ್ಣಾವಧಿವರೆಗೂ ಸಿಎಂ ಆಗಿ ಮುಂದುವರೆಯುತ್ತಾರೆ. ಬದಲಾವಣೆ ಚರ್ಚೆಯನ್ನು ಇಲ್ಲಿಗೆ ನಿಲ್ಲಿಸಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...