alex Certify BIG NEWS: ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು

ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿ ಸಮೀಪ ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲಾ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲೆಂದು ಸಿಎಂ ಬೊಮ್ಮಾಯಿ ಹುಬ್ಬಳ್ಳಿಯಿಂದ ಯಲ್ಲಾಪುರ ತಾಲೂಕಿಗೆ ತೆರಳುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ. ಮುಖ್ಯಮಂತ್ರಿಗಳ ಬೆಂಗಾವಲು ವಾಹನದ ಹಿಂದೆ ಶಾಸಕ ಶಿವರಾಮ್ ಹೆಬ್ಬಾರ್ ತಮ್ಮ ಕಾರಿನಲ್ಲಿ ಸಾಗುತ್ತಿದ್ದರು. ಈ ವೇಳೆ ಚಾಲಕನ ಎಡವಟ್ಟಿನಿಂದಾಗಿ ಕಾರು ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿಹೊಡೆದಿದೆ.

ಕಾರು ಹಾಗೂ ಬೆಂಗಾವಲು ವಾಹನಗಳು ಜಖಂಗೊಂಡಿದ್ದು, ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...