ಕೊಪ್ಪಳ: ಜನವರಿ ಅಂತ್ಯದ ವೇಳೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಭವಿಷ್ಯ ನುಡಿದಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಜನವರಿ ಅಂತ್ಯಕ್ಕೆ ಸಿಎಂ ಬೊಮ್ಮಾಯಿ ಅಧಿಕಾರ ಹೋಗುತ್ತೆ ಎಂದು ಬಹಳ ಸ್ಪಷ್ಟವಾಗಿ ಮಾಹಿತಿಗಳು ನಮಗೆ ಬರುತ್ತಿವೆ ಎಂದು ತಿಳಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಅಧಿಕಾರ ಹೋಗುತ್ತೆ, ಜನವರಿಗೆ ಹೊಸ ಸಿಎಂ: ಶಿವರಾಜ್ ತಂಗಡಗಿ ಹೊಸ ಬಾಂಬ್
ಇನ್ನು ಒಂದುವರೆ ವರ್ಷದಲ್ಲಿ ರಾಜ್ಯದಲ್ಲಿ ಇಬ್ಬರು ಸಿಎಂ ಆಗುತ್ತಾರೆ. ಹಾಲಿ ಸಿಎಂ ಬದಲಾವಣೆ ನೂರಕ್ಕೆ ನೂರರಷ್ಟು ಸತ್ಯ. ಬೊಮ್ಮಾಯಿ ಬಿಟ್ಟು ಇನ್ನೂ ಒಬ್ಬರು ಸಿಎಂ ಆಗುತ್ತಾರೆ. ಬಿಜೆಪಿ ಈ ಹಿಂದೆ ಮೂವರು ಮುಖ್ಯಮಂತ್ರಿ ಮಾಡಿತ್ತು. ಈಗ ನಾಲ್ವರು ಮುಖ್ಯಮಂತ್ರಿ ಆಗಬಹುದು ಎಂದು ಹೇಳಿದ್ದಾರೆ.
ಹಾಲಿ ಸಿಎಂ ಬೊಮ್ಮಾಯಿ ಆಡಳಿತ ನಡೆಸಲು ಸಮರ್ಥರಿಲ್ಲ. ಬಿಟ್ ಕಾಯಿನ್ ಬಗ್ಗೆ ಆರೋಪಿಸುವವರೇ ಸಾಕ್ಷ್ಯ ಕೊಡಬೇಕು ಎನ್ನುವುದಾದರೆ ಸರ್ಕಾರ ಯಾಕೆ ಬೇಕು? ಎಂದು ಪ್ರಶ್ನಿಸಿದ್ದಾರೆ.