alex Certify BIG NEWS: ಸಿಎಂ ಬೊಮ್ಮಾಯಿ RSS ಕೈಗೊಂಬೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬೊಮ್ಮಾಯಿ RSS ಕೈಗೊಂಬೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ರಾಯಚೂರು: ಆರ್ ಎಸ್ ಎಸ್ ಹೇಳಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೇಳುತ್ತಾರೆ. ಬೊಮ್ಮಾಯಿ ಆರ್ ಎಸ್ ಎಸ್ ಕೈಗೊಂಬೆಯಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾಯಚೂರಿನಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮಾತೆತ್ತಿದರೆ ಬಿಜೆಪಿ ನಾಯಕರು ನನ್ನನ್ನೇ ಬೈಯುತ್ತಾರೆ. ಅಂದರೆ ಬಿಜೆಪಿ ನಾಯಕರಿಗೆ ನಾನು ಎಂದರೆ ಭಯ. ಯಾಕೆಂದರೆ ನಾನೊಬ್ಬನೆ ಪ್ರಧಾನಿ ಮೋದಿ, ಆರ್ ಎಸ್ ಎಸ್ ಬಗ್ಗೆ ಮಾತನಾಡುವುದು. ಹಾಗಾಗಿ ಬಿಜೆಪಿಯವರಿಗೆ ನನ್ನ ಬಗ್ಗೆ ಎಷ್ಟು ಭಯ ನೋಡಿ ಎಂದು ಹೇಳಿದರು.

ಇದೇ ವೇಳೆ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ಅನಂತಕುಮಾರ್ ಹೆಗಡೆ ಗ್ರಾಮ ಪಂಚಾಯ್ತಿ ಸದಸ್ಯನಾಗಲೂ ಲಾಯಕ್ಕಿಲ್ಲ. ಸಂವಿಧಾನವನ್ನೇ ಬದಲಿಸುತ್ತೇನೆ ಎಂದು ಕೇಂದ್ರ ಸಚಿವರಾಗಿದ್ದಾಗ ಹೇಳಿಕೆ ಕೊಟ್ಟಿದ್ದರು. ಪ್ರಧಾನಿ ಮೋದಿ, ಅಮಿತ್ ಶಾ ಮಾತು ಕೇಳಿ ಹೀಗೆ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...