alex Certify BIG NEWS: ಸಿಎಂ ಯಡಿಯೂರಪ್ಪ ಪರ ಡಿ.ವಿ.ಸದಾನಂದಗೌಡ ಬ್ಯಾಟಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಯಡಿಯೂರಪ್ಪ ಪರ ಡಿ.ವಿ.ಸದಾನಂದಗೌಡ ಬ್ಯಾಟಿಂಗ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಮಠಾಧೀಶರು ಸಿಎಂ ನಿವಾಸಕ್ಕೆ ದೌಡಾಯಿಸುತ್ತಿದ್ದು, ಯಡಿಯೂರಪ್ಪನವರಿಗೆ ಬೆಂಬಲ ನೀಡಿರುವ ಬೆನ್ನಲ್ಲೆ ಇದೀಗ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಸಿಎಂ ಬಿ ಎಸ್ ವೈ ಪರ ಬ್ಯಾಟಿಂಗ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ನನಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ರಾಜ್ಯಗಳ ಬೆಳವಣಿಗೆಯನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಅದೇ ರೀತಿ ನಾಯಕತ್ವ ಬದಲಾವಣೆ ಬಗ್ಗೆ ವರಿಷ್ಠರು ನಿರ್ಧಾರ ಮಾಡುತ್ತಾರೆ. ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿದ್ದಾರೆ. ರಾಜ್ಯದ ಸಮಸ್ಯೆ, ಪಕ್ಷದ ಬೆಳವಣಿಗೆ ಬಗ್ಗೆ ಚರ್ಚಿಸಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.

ಟೋಕಿಯೋ ಒಲಿಂಪಿಕ್ಸ್​ಗೂ ಕೋವಿಡ್​ ಕರಿನೆರಳು: ಮುಂದಿನ ಕ್ರಮದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಆಡಳಿತ ಮಂಡಳಿ

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಡಿ.ವಿ.ಎಸ್, ಆಡಿಯೋ ತಮ್ಮದಲ್ಲ ಎಂದು ಕಟೀಲು ಸ್ಪಷ್ಟಪಡಿಸಿದ್ದಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...