alex Certify BIG NEWS: ಸಿಎಂ ವೇಳಾಪಟ್ಟಿಯಲ್ಲಿ ದಿಢೀರ್ ಬದಲಾವಣೆ; ಕುತೂಹಲ ಮೂಡಿಸಿದ ಜೆ.ಪಿ. ನಡ್ಡಾ ಭೇಟಿಯ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ವೇಳಾಪಟ್ಟಿಯಲ್ಲಿ ದಿಢೀರ್ ಬದಲಾವಣೆ; ಕುತೂಹಲ ಮೂಡಿಸಿದ ಜೆ.ಪಿ. ನಡ್ಡಾ ಭೇಟಿಯ ನಿರ್ಧಾರ

ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದು, ಸಿಎಂ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಇಂದು ಬೆಳಿಗ್ಗೆ 8:15ಕ್ಕೆ ದೆಹಲಿಯಿಂದ ಬೆಂಗಳೂರಿಗೆ ಹೊರಡಬೇಕಿದ್ದ ಸಿಎಂ ಬಿಮ್ಮಾಯಿ, ತಮ್ಮ ವೇಳಾಪಟ್ಟಿಯಲ್ಲಿ ಏಕಾಏಕಿ ಬದಲಾವಣೆ ಮಾಡಿದ್ದು, ದಿಢೀರ್ ಆಗಿ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ನಡ್ಡಾ ಭೇಟಿಗೆ ಕಾಲವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ.

SHOCKING: ಡ್ರಾಪ್ ಕೇಳುವ ನೆಪದಲ್ಲಿ ಗ್ಯಾಂಗ್ ಮಾಡಿದ್ದೇನು ಗೊತ್ತಾ…?

ನಿನ್ನೆಯಷ್ಟೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ, ಈ ಬಾರಿಯ ದೆಹಲಿ ಭೇಟಿಯಲ್ಲಿ ಯಾವುದೇ ರಾಜಕೀಯ ವಿಚಾರದ ಚರ್ಚೆ ಇಲ್ಲ ಎಂದು ಹೇಳಿದ್ದರು. ಆದರೆ ಈಗ ಏಕಾಏಕಿ ನಡ್ಡಾ ಅವರನ್ನು ಭೇಟಿಯಾಗಲು ಮುಂದಾಗಿರುವುದು ಸಚಿವಾಕಾಂಕ್ಷಿಗಳಲ್ಲಿ ಮತ್ತೆ ನಿರೀಕ್ಷೆ ಹೆಚ್ಚಿದೆ. ಅಲ್ಲದೇ ಸಚಿವ ಸಂಪುಟ ವಿಸ್ತರಣೆ ಹಾಗೂ ಉಪಚುನಾವಣೆ ಕುರಿತ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...