alex Certify BIG NEWS: ಸಿಎಂ BSY ಪರ ಸುಬ್ರಹ್ಮಣಿಯನ್ ಸ್ವಾಮಿ ಬ್ಯಾಟಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ BSY ಪರ ಸುಬ್ರಹ್ಮಣಿಯನ್ ಸ್ವಾಮಿ ಬ್ಯಾಟಿಂಗ್

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಪರ ನಿಂತಿರುವ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ಬಿಜೆಪಿ ಯಾಕೆ ಹಳೆ ತಪ್ಪುಗಳನ್ನೆ ಮತ್ತೆ ಮಾಡಲು ಮುಂದಾಗಿದೆ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಯಡಿಯೂರಪ್ಪ ಬದಲಾವಣೆ ಒಂದು ಕೆಟ್ಟ ಸಲಹೆ. ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇ ಬಿ.ಎಸ್.ವೈ. ಕೆಲವರ ಪಾಲಿಗೆ ಯಡಿಯೂರಪ್ಪ ನಿಷ್ಠುರ ಎಂಬ ಕಾರಣಕ್ಕೆ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 4-5 ರೂ. ಇಳಿಕೆ ಶೀಘ್ರ

ಬಿಜೆಪಿಯಲ್ಲಿ ಯಡಿಯೂರಪ್ಪ ಇಲ್ಲದೇ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬಿಜೆಪಿ ಈ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಯಾಕೆ ಮಾಡಲು ಹೊರಟಿದೆ? ಎಂದು ಪ್ರಶ್ನಿಸುವ ಮೂಲಕ ಬಿ.ಎಸ್.ವೈ. ಕೆಜೆಪಿಯಿಂದ ಬಿಜೆಪಿಗೆ ಮರಳಿ ಬಂದ ಬಳಿಕವೇ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂಬುದನ್ನು ನೆನಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...