alex Certify BIG NEWS: ಸಿದ್ದರಾಮಯ್ಯಗೆ ಡಿ.ಕೆ.ಶಿವಕುಮಾರ್ ಟೋಪಿ ಹಾಕುತ್ತಿದ್ದಾರೆ; ಕಾಂಗ್ರೆಸ್ ನ ಕಿಡಿ ಸಮಾವೇಶದ ಬಳಿಕ ಬೆಂಕಿಯಾಗಿ ಉರಿಯುತ್ತಿದೆ; ‘ಕೈ’ನಾಯಕರಿಗೆ ತಿರುಗೇಟು ನೀಡಿದ ಸಚಿವ ಸೋಮಶೇಖರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯಗೆ ಡಿ.ಕೆ.ಶಿವಕುಮಾರ್ ಟೋಪಿ ಹಾಕುತ್ತಿದ್ದಾರೆ; ಕಾಂಗ್ರೆಸ್ ನ ಕಿಡಿ ಸಮಾವೇಶದ ಬಳಿಕ ಬೆಂಕಿಯಾಗಿ ಉರಿಯುತ್ತಿದೆ; ‘ಕೈ’ನಾಯಕರಿಗೆ ತಿರುಗೇಟು ನೀಡಿದ ಸಚಿವ ಸೋಮಶೇಖರ್

ಮೈಸೂರು: ರಾಜ್ಯ ಬಿಜೆಪಿಯಲ್ಲಿ ಮೂರನೇ ಸಿಎಂ ಪ್ರಸ್ತಾಪವೇ ಇಲ್ಲ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬೊಮ್ಮಾಯಿ ಬದಲಾವಣೆ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ನಾಯಕರು ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿಯಲ್ಲಿ ಸಿಎಂ ಬದಲಾವಣೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಸಿದ್ದರಾಮಯ್ಯನವರಿಗೆ ಟೋಪಿ ಹಾಕುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಒಬ್ಬರಿಗೊಬ್ಬರು ಟೋಪಿ ಹಾಕಿಕೊಳ್ಳುವುದನ್ನು ರಾಜ್ಯದ ಜನತೆ ನೋಡಿ ನಗುತ್ತಿದ್ದಾರೆ. ಕಾಂಗ್ರೆಸ್ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದೆ, ನಮ್ಮ ತಟ್ಟೆಯ ನೊಣದ ಬಗ್ಗೆಯೇ ಅವರಿಗೆ ಚಿಂತೆ. ಕಾಂಗ್ರೆಸ್ ನಲ್ಲಿ ಇದ್ದ ಕಿಡಿ ಸಿದ್ದರಾಮೋತ್ಸವದ ಬಳಿಕ ಬೆಂಕಿಯಾಗಿ ಉರಿಯುತ್ತಿದೆ. ಹಾಗಾಗಿ ವಿಷಯಾಂತರ ಮಾಡಲು ಬಿಜೆಪಿ ಬಗ್ಗೆ ಅನಗತ್ಯ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಯಾವುದೇ ಕಾರಣಕ್ಕೂ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಇಲ್ಲ. ಬೊಮ್ಮಾಯಿ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಪ್ರಧಾನಿ ಮೋದಿ ಕೂಡ ಸಿಎಂ ಆಡಳಿತ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಇದೇ ವೇಳೆ ತಾವಂತು ಸಿಎಂ ರೇಸ್ ನಲ್ಲಿ ಇಲ್ಲ ಎಂದ ಸೋಮಶೇಖರ್, ಹೇಗೋ ಸಚಿವನಾಗಿದ್ದೇನೆ. ಸಚಿವನಾಗಿಯೇ ಇರುತ್ತೇನೆ. ಸಿಎಂ ಅಗುವ ಆಸೆ ನನಗಿಲ್ಲ, ಸಚಿವ ಸ್ಥಾನವೂ ಬೇಡ ಅಂದರೆ ಹೇಳಿ ಅದನ್ನು ಬಿಡುತ್ತೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...