alex Certify BIG NEWS: ಸಿದ್ದರಾಮಯ್ಯಗೆ ಬಿಜೆಪಿಗಿಂತ ಡಿಕೆಶಿ ಭಯ ಶುರುವಾಗಿದೆ; ಸಚಿವ ಶ್ರೀರಾಮುಲು ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯಗೆ ಬಿಜೆಪಿಗಿಂತ ಡಿಕೆಶಿ ಭಯ ಶುರುವಾಗಿದೆ; ಸಚಿವ ಶ್ರೀರಾಮುಲು ಟಾಂಗ್

ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯ ಬಾದಾಮಿ ಬಿಟ್ಟು ಈ ಬಾರಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಬಹುತೇಕ ಖಚಿತವಾಗಿದೆ. ಈ ನಡುವೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶ್ರೀರಾಮುಲು, ಸಿದ್ದರಾಮಯ್ಯಗೆ ಡಿ.ಕೆ.ಶಿವಕುಮಾರ್ ಭಯ ಶುರುವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕೊಪ್ಪಳದ ಗಂಗಾವತಿ ತಾಲೂಕಿನ ಪಂಪಸಾಗರದಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ಸಿದ್ದರಾಮಯ್ಯ ಅವರಿಗೆ ಬಿಜೆಪಿಗಿಂತ ಡಿ.ಕೆ.ಶಿವಕುಮಾರ್ ಭಯ ಆರಂಭವಾಗಿದೆ. ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಡಿಕೆಶಿ ಭಯ ಕಾಡಲಿದೆ. ಯಾವ ಕ್ಷೇತ್ರದಲ್ಲಿ ನಿಂತರೂ ಸೋಲುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯನವರ ಕೋಲಾರ ಪ್ರವಾಸ ಚುನಾವಣೆ ಗಿಮಿಕ್, ಬಾದಾಮಿ ಜನ ಸಿದ್ದರಾಮಯ್ಯ ಅವರನ್ನು ಕ್ಷಮಿಸಲ್ಲ. ಡಿಕೆಶಿ ಪ್ರಭಾವ ಇಲ್ಲದ ಕಡೆ ಸ್ಪರ್ಧಿಸಲು ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಹೀಗಾಗಿ ಡಿಕೆಶಿ ಭಯ ಆರಂಭವಾಗಿದೆ ಎಂದು ವ್ಯಂಗ್ಯವಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...