alex Certify BIG NEWS: ಸಿದ್ದರಾಮಯ್ಯ ಯಾಕಿಂಥ ರಾಜಕಾರಣ ಮಾಡುತ್ತಿದ್ದಾರೆ ? ಹೆಡ್ಗೆವಾರ್ ಬಗ್ಗೆ ಅರಿತು ಮಾತನಾಡಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಯಾಕಿಂಥ ರಾಜಕಾರಣ ಮಾಡುತ್ತಿದ್ದಾರೆ ? ಹೆಡ್ಗೆವಾರ್ ಬಗ್ಗೆ ಅರಿತು ಮಾತನಾಡಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಹುಬ್ಬಳ್ಳಿ: ಆರ್.ಎಸ್.ಎಸ್. ನವರು ಮೂಲ ಭಾರತದವರಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಯಾಕಿಂಥ ರಾಜಕಾರಣ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಇತ್ತೀಚೆಗೆ ಬಾಯಿಗೆ ಬಂದಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಮುಸ್ಲಿಂ ಮತದಾರರ ಓಲೈಕೆಗಾಗಿ, ರಾಹುಲ್ ಗಾಂಧಿ ಓಲೈಕೆಗಾಗಿ ಹೇಳಿಕೆಗಳನ್ನು ನೀಡುತ್ತಿರುವುದು ಎಷ್ಟು ಸರಿ ? ಬಿಜೆಪಿಯನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ಎಲ್ಲವನ್ನು ವಿರೋಧಿಸುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

ಹೆಡ್ಗೆವಾರ್ ಯಾರು ? ಏನು ಮಾಡಿದರು ಎಂಬುದನ್ನು ಮೊದಲು ತಿಳಿದುಕೊಳ್ಳಲಿ. ಹೆಡ್ಗೆವಾರ್ ಸೇವಾದಳದಲ್ಲಿ ಇದ್ದರು ಎಂಬುದು ಗೊತ್ತಿಲ್ಲವೇ ? ಅವರು ಜನ್ಮತಃ ರಾಷ್ಟ್ರ ಭಕ್ತರು ಎಂದು ತಿಳಿದಿಲ್ಲವೇ ? ಸಿದ್ದರಾಮಯ್ಯನವರಿಗೆ ಆರ್ ಎಸ್ ಎಸ್ ಬಗ್ಗೆ ಗೊತ್ತಿಲ್ಲ ಎಂದರೆ ಅವರ ಬಗ್ಗೆ ಅನುಕಂಪವಿದೆ. ಆದರೆ ಗೊತ್ತಿದ್ದು ಮಾತನಾಡಿದರೆ ಅವರ ಹೇಳಿಕೆ ಖಂಡನೀಯ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...