alex Certify BIG NEWS: ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ ಸ್ಪರ್ಧೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ ಸ್ಪರ್ಧೆ

ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದಾರೆ. ಅವರು ಎಲ್ಲಿಯೇ ಸ್ಪರ್ಧೆ ಮಾಡಿದರೂ ಈ ಬಾರಿ ಸೋಲು ಖಚಿತ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಸಚಿವರು, ಸಿದ್ದರಾಮಯ್ಯ ಕೋಲಾರದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅವರ ಕೋಲಾರ ಭೇಟಿ ಚುನಾವಣಾ ಗಿಮಿಕ್ ಅಷ್ಟೇ. ಅವರು ಕೊನೆಯದಾಗಿ ಸ್ಪರ್ಧಿಸುವುದು ವರುಣಾದಲ್ಲೇ. ವರುಣಾದಲ್ಲಿ ಕೂಡ ಅವರನ್ನು ಸೋಲಿಸಲು ನಮ್ಮ ಕಾರ್ಯಕರ್ತರು ಕೆಲಸ ಮಾಡ್ತಿದ್ದಾರೆ ಎಂದರು.

ಸಿದ್ದರಾಮಯ್ಯನವರಿಗೆ ರಾಜಕೀಯ ಪುನರ್ಜನ್ಮ ನೀಡಿದ್ದ ಬಾದಾಮಿಯ ಜನರಿಗೆ ಮೋಸ ಮಾಡ್ತಿದ್ದಾರೆ. ಬಾದಾಮಿಯಲ್ಲಿ ಆಯ್ಕೆಯಾದ ಸಿದ್ದರಾಮಯ್ಯ ಕ್ಷೇತ್ರದ ಜನತೆಗೆ ಮಾಡಿದ್ದೇನು? ಈಗ ಗೆದ್ದ ಕ್ಷೇತ್ರವನ್ನು ಬಿಟ್ಟು ಬೇರೆಡೆ ಮುಖ ಮಾಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಯಾರೂ ಊಹಿಸದ ಅಚ್ಚರಿ ವ್ಯಕ್ತಿ ಸ್ಪರ್ಧೆ ಮಾಡಲಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...