alex Certify BIG NEWS: ಸಿದ್ದರಾಮಯ್ಯ ಸರ್ಕಾರದಿಂದ ಸಾಕ್ಷ್ಯ ನಾಶ; ಕ್ಷಮೆ ಕೇಳೋ ಪ್ರಶ್ನೆಯೇ ಇಲ್ಲ; ಪರಿಷತ್ ಸದಸ್ಯ ರವಿಕುಮಾರ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಸರ್ಕಾರದಿಂದ ಸಾಕ್ಷ್ಯ ನಾಶ; ಕ್ಷಮೆ ಕೇಳೋ ಪ್ರಶ್ನೆಯೇ ಇಲ್ಲ; ಪರಿಷತ್ ಸದಸ್ಯ ರವಿಕುಮಾರ್ ವಾಗ್ದಾಳಿ

ಬೆಂಗಳೂರು: ಪರೇಶ್ ಮೇಸ್ತಾ ಪ್ರಕರಣದ ವರದಿ ಬಗ್ಗೆ ಬಿಜೆಪಿ ಕ್ಷಮೆ ಯಾಚಿಸುವ ಪ್ರಶ್ನೆಯೇ ಇಲ್ಲ. ಸಾಕ್ಷ್ಯ ನಾಶ ಮಾಡಿದ್ದಕ್ಕಾಗಿ ಸಿದ್ದರಾಮಯ್ಯ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ರವಿಕುಮಾರ್, ಕಾಂಗ್ರೆಸ್ ಸರ್ಕಾರ ಭಂಡಧೈರ್ಯದಿಂದ ಪಿಎಫ್ ಐ ಮೇಲಿನ ಕೇಸ್ ವಾಪಸ್ ಪಡೆದಿತ್ತು. ಪಿಎಫ್ ಐ ಸಂಘಟನೆ ಬೆಂಬಲಿಸಿದ್ದೆ ಕೊಲೆಗಳಿಗೆ ಕಾರಣವಾಗಿದೆ. ರಾಜ್ಯದಲ್ಲಿ ನಡೆದ ಕೊಲೆಗಳಿಗೆ ಸಿದ್ದರಾಮಯ್ಯ ಕಾರಣ ಎಂದು ಆರೋಪಿಸಿದರು.

ಪರೇಶ್ ಮೇಸ್ತಾ ಸಾವು ಕೊಲೆ ಎಂಬುದರಲ್ಲಿ ಎರಡು ಮಾತಿಲ್ಲ. ರಕ್ತದ ಮಡುವಿನಲ್ಲಿ ಪರೇಶ್ ಶವ ಪತ್ತೆಯಾಗಿದೆ. ಅಂದ ಮೇಲೆ ಇದು ಸಹಜ ಸಾವಾಗಲು ಹೇಗೆ ಸಾಧ್ಯ? ಸಿದ್ದರಾಮಯ್ಯ ಸರ್ಕಾರ ಸಾಕ್ಷ್ಯ ನಾಶ ಮಾಡಿ ಸಿಬಿಐಗೆ ಸಾಕ್ಷ್ಯ ಸಿಗದಂತೆ ಮಾಡಿದೆ. ಹುಬ್ಬಳ್ಳಿಯಲ್ಲಿ ಯೋಗೇಶ್ ಗೌಡ ಕೊಲೆಯಲ್ಲಿ ಏನಾಯ್ತು ಎಂಬುದು ಗೊತ್ತಿದೆ. ಡಿ.ಕೆ.ರವಿ ಆತ್ಮಹತ್ಯೆ, ಡಿವೈ ಎಸ್ ಪಿ ಗಣಪತಿ ಆತ್ಮಹತ್ಯೆ ಕೇಸ್ ಎಲ್ಲಾ ಪ್ರಕರಣಗಳಲ್ಲಿಯೂ ಸಾಕ್ಷ್ಯ ನಾಶ ಮಾಡಿದ್ದಾರೆ. ಈಗ ಪರೇಶ್ ಮೇಸ್ತ ಪ್ರಕರಣ. ಮೇಸ್ತ ಪ್ರಕರಣದ ಬಗ್ಗೆ ಸಿಬಿಐ ನೀಡಿರುವ ವರದಿ ಒಪ್ಪಲು ಸಾಧ್ಯವಿಲ್ಲ. ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿರುವ ಸಂಪೂರ್ಣ ವರದಿ ಬಗ್ಗೆ ಮಾಹಿತಿ ಬಹಿರಂಗವಾಗಲಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...