alex Certify BIG NEWS: ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರಿಗೆ ಚರ್ಚಿಸಲು ಬೇರೆ ವಿಚಾರವಿಲ್ಲವೇ….? ವಿಪಕ್ಷ ನಾಯಕನಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರಿಗೆ ಚರ್ಚಿಸಲು ಬೇರೆ ವಿಚಾರವಿಲ್ಲವೇ….? ವಿಪಕ್ಷ ನಾಯಕನಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು

ಮಂಗಳೂರು: ಆರ್.ಎಸ್.ಎಸ್ ಮೂಲ ಪ್ರಶ್ನಿಸಿದ್ದ ವಿಪಕ್ಷ ನಾಯಕ ಸಿದ್ದಾರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನವರಿಗೆ ಮಾತನಾಡಲು ಈ ದೇಶದಲ್ಲಿ ಬೇರೆ ವಿಚಾರಗಳಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಈ ದೇಶದ ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಆರ್.ಎಸ್.ಎಸ್ ನವರು. ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಆರ್.ಎಸ್.ಎಸ್ ನವರು, ನಾನು ಕೂಡ ಆರ್.ಎಸ್.ಎಸ್ ನಿಂದ ಬಂದವನು. ದೇಶದಲ್ಲಿ ಆರ್.ಎಸ್.ಎಸ್ ನಿಂದ ಬಂದವರು ಲಕ್ಷ ಲಕ್ಷ ಜನರಿದ್ದಾರೆ. ಇಂತಹ ವಿಚಾರ ಚರ್ಚೆಯಿಂದ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದರು.

ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ, ಅವರ ಪಕ್ಷ ಸಂಘಟನೆ, ಅಧಿಕಾರದ ಅಂತಿಮ ದಿನಗಳು ಬಂದಿವೆ. ಅದೆಲ್ಲವೂ ಗೊತ್ತಾಗಿ ವಿಚಲಿತರಾಗಿ ಈ ರೀತಿ ಹೇಳುತ್ತಿದ್ದಾರೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...