alex Certify BIG NEWS: ಸಿದ್ಧಗಂಗಾ ಮಠದಿಂದ SSLC ವಿದ್ಯಾರ್ಥಿ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ಧಗಂಗಾ ಮಠದಿಂದ SSLC ವಿದ್ಯಾರ್ಥಿ ನಾಪತ್ತೆ

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದಿದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಸಂದೀಪ್ ರಮೇಶ್ ರಾಥೋಡ್ ನಾಪತ್ತೆಯಾಗಿರುವ ವಿದ್ಯಾರ್ಥಿ. ಸಿದ್ದಗಂಗಾ ಮಠದಲ್ಲಿ 10ನೇ ತರಗತಿ ಓದುತ್ತಿದ್ದ ಸಂದೀಪ್ ಅಕ್ಟೋಬರ್ 30ರಿಂದ ನಾಪತ್ತೆಯಾಗಿದ್ದಾನೆ. ಮಠದಿಂದ ನಾಪತ್ತೆಯಾಗಿರುವ ವಿದ್ಯಾರ್ಥಿ ತನ್ನ ಊರಿಗೂ ಹೋಗಿಲ್ಲ. ಇದರಿಂದ ಪೋಷಕರು ಆತಂಕಕ್ಕೀಡಾಗಿದ್ದಾರೆ.

ವಿದ್ಯಾರ್ಥಿ ಸಂದೀಪ್ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಕೇಳೂರು ತಾಂಡಾ ನಿವಾಸಿ. ಸಂದೀಪ್ ತಂದೆ ರಮೇಶ್ ತಮ್ಮ ಮಗ ನಾಪತ್ತೆಯಾಗಿದ್ದಾನೆ ಎಂದು ತುಮಕೂರಿನ ಕ್ಯಾತಸಂದ್ರ ಠಾಣೆಯಲ್ಲಿ ದೂರು ನೀಡಿದ್ದಾರೆ. ವಿದ್ಯಾರ್ಥಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...