alex Certify BIG NEWS: ಸಿ.ಎಂ. ಇಬ್ರಾಹಿಂ ಧೂಳು ಸಹ ಬಿಜೆಪಿಗೆ ಬರಲು ಬಿಡಲ್ಲ; ರಾಷ್ಟ್ರವಾದಿ ಮುಸ್ಲಿಂರನ್ನು ಮಾತ್ರ BJPಗೆ ಸೇರಿಸಿಕೊಳ್ತೀವಿ; ಸಚಿವ ಈಶ್ವರಪ್ಪ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿ.ಎಂ. ಇಬ್ರಾಹಿಂ ಧೂಳು ಸಹ ಬಿಜೆಪಿಗೆ ಬರಲು ಬಿಡಲ್ಲ; ರಾಷ್ಟ್ರವಾದಿ ಮುಸ್ಲಿಂರನ್ನು ಮಾತ್ರ BJPಗೆ ಸೇರಿಸಿಕೊಳ್ತೀವಿ; ಸಚಿವ ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಯಾವುದೇ ಕಾರಣಕ್ಕೂ ಸಿ.ಎಂ. ಇಬ್ರಾಹಿಂ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಾಧ್ಯವೇ ಇಲ್ಲ. ಅವರ ಧೂಳು ಕೂಡ ಬಿಜೆಪಿಗೆ ಬರಬಾರದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ, ಇಬ್ರಾಹಿಂ ಅವರನ್ನು ಯಾವ ಕಾರಣಕ್ಕೂ ಬಿಜೆಪಿಗೆ ಸೇರಿಸಲ್ಲ. ರಾಷ್ಟ್ರವಾದಿ ಮುಸ್ಲಿಂರನ್ನು ಮಾತ್ರ ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದರು.

ಇದೇ ವೇಳೆ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ, ಕಾಂಗ್ರೆಸ್ ಶಾಸಕರನ್ನೇ ಹಿಡಿದಿಟ್ಟುಕೊಳ್ಳಲು ಆಗಿಲ್ಲ, 17 ಶಾಸಕರು ಕಾಂಗ್ರೆಸ್ ಬೇಡ ಅಂತ ಬಿಜೆಪಿ ಸೇರಿದರು. ಮೊದಲು ಅವರ ಶಾಸಕರನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿ ಎಂದು ತಿರುಗೇಟು ನೀಡಿದರು.

ಒಂದೆಡೆ ಡಿಕೆಶಿ, ಇನ್ನೊಂದೆಡೆ ಸಿದ್ದರಾಮಯ್ಯ ಜಾತ್ರೆ ನಡೆಯುತ್ತಿದೆ. ನಮ್ಮ ಶಾಸಕರು ಸಿಂಹದ ಮರಿಗಳಂತೆ ಒಬ್ಬರೂ ಬಿಜೆಪಿ ಬಿಟ್ಟು ಬೇರೆ ಪಕ್ಷಗಳಿಗೆ ಹೋಗಲ್ಲ. ಗಿಣಿ ಭವಿಷ್ಯದಲ್ಲಿ ಸಿದ್ದು, ಡಿಕೆಶಿ ಸ್ಪರ್ಧೆ ಮಾಡ್ತಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...