alex Certify BIG NEWS: ಸುಟ್ಟ ಸ್ಥಿತಿಯಲ್ಲಿ ಬಾಣಂತಿ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುಟ್ಟ ಸ್ಥಿತಿಯಲ್ಲಿ ಬಾಣಂತಿ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್

ಕೊಪ್ಪಳ: ಸುಟ್ಟ ಸ್ಥಿತಿಯಲ್ಲಿ ಬಾಣಂತಿಯ ಶವ ಪತ್ತೆ ಪ್ರರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಿಗೂಢ ಕೊಲೆ ಪ್ರಕರಣವನ್ನು ಕೊಪ್ಪಳ ಪೊಲಿಸರು ಭೇದಿಸಿದ್ದಾರೆ.

ಕೆಲ ದಿನಗಳ ಹಿಂದೆ ನೇತ್ರಾವತಿ ಎಂಬ ಬಾಣಂತಿಯ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೀಗ ಈ ಪ್ರಕರಣದಲ್ಲಿ ತಾಯಿ ಹಾಗೂ ಸಹೋದರನೇ ನೇತ್ರಾವತಿಯನ್ನು ಕೊಲೆಗೈದು ಸುಟ್ಟು ಹಾಕಿದ್ದಾರೆ ಎಂಬ ಆಘಾತಕಾರಿ ವಿಷಯ ಬಯಲಾಗಿದೆ.

ತಾಯಿ ಕನಕಮ್ಮ ಕಂಬಳಿ ಹಾಗೂ ಸಹೋದರ ಪ್ರಕಾಶ್ ಕಂಬಳಿ ಈ ಕೃತ್ಯವೆಸಗಿದ್ದು, ಕೌಟುಂಬಿಕ ವಿಚಾರಕ್ಕೆ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮಾರ್ಚ್ 20ರಂದು ಅಮವಾಸ್ಯೆ ದಿನ ಸುಟ್ಟ ಸ್ಥಿತಿಯಲ್ಲಿ ನೇತ್ರಾವತಿ ಶವ ಪತ್ತೆಯಾಗಿತ್ತು. ನಿಧಿಗಾಗಿ ನರಬಲಿ ಕೊಡಲಾಗಿದೆ ಎಂಬ ಚರ್ಚೆ ಕೂಡ ಆರಂಭವಾಗಿತ್ತು. ಆದರೆ ತಾಯಿ ಹಾಗೂ ಸಹೋದರ ಇಬ್ಬರೂ ಸೇರಿ ಬಾಣಂತಿಯನ್ನು ಕೊಂದು ಸಾಕ್ಷ್ಯ ನಾಶಕ್ಕಾಗಿ ಶವವನ್ನು ಸುಟ್ಟುಹಾಕಿದ್ದರು ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...