alex Certify BIG NEWS: ಸುರತ್ಕಲ್ ಹತ್ಯೆ ಪ್ರಕರಣ; ಕಾರು ಚಾಲಕ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುರತ್ಕಲ್ ಹತ್ಯೆ ಪ್ರಕರಣ; ಕಾರು ಚಾಲಕ ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದ್ದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರಿನಲ್ಲಿ ಬಂದಿದ್ದ ಆರೋಪಿಗಳು ಫಾಜಿಲ್ ನನ್ನು ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಕಾರಿನಲ್ಲಿ ಕರೆ ತಂದ ಅಜಿತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಕಾರಿನಲ್ಲಿ ಬಂದಿದ್ದು ಹಾಗೂ ಮಾರಕಾಸ್ತ್ರಗಳಿಂದ ಫಾಜಿಲ್ ಮೇಲೆ ಹಲ್ಲೆ ನಡೆಸಿ ಹತ್ಯೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಿಸಿಟಿವಿ ಆಧಾರಿಸಿ ಸ್ಪಾಟ್ ಗೆ ಬಂದಿದ್ದ ಹ್ಯುಂಡೈ ಇಯಾನ್ ಕಾರಿನಲ್ಲಿ ಆರೋಪಿಗಳು ಬಂದಿದ್ದು ಗೊತ್ತಾಗಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿರುವ ಎಲ್ಲಾ ಇಯಾನ್ ಕಾರುಗಳ ಮಾಹಿತಿ ಕಲೆ ಹಾಕಿದ ಪೊಲೀಸರು, ಬಿಳಿ ಬಣ್ಣದ ಇಯಾನ್ ಕಾರಿನ ಮಾಲೀಕನನ್ನು ಕರೆದು ವಿಚಾರಿಸಿದ್ದಾರೆ. ಬಳಿಕ ಕಾರಿನ ಚಾಲಕ ಆರೋಪಿಗಳನ್ನು ಕರೆತಂದ ಬಗ್ಗೆ ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಕಾರು ಚಾಲಕ ಅಜಿತ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಾಲಕ ನೀಡುವ ಸುಳಿವಿನ ಪ್ರಕಾರ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...