alex Certify BIG NEWS: ‘ಸೂಟ್ ಕೇಸ್’ ಆರೋಪಕ್ಕೆ ತಿರುಗಿಬಿದ್ದ HDK; ವಚನ ಭ್ರಷ್ಟ ಕಳಂಕದ ವಿರುದ್ಧ ಮತ್ತೆ ಗುಡುಗಿದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಸೂಟ್ ಕೇಸ್’ ಆರೋಪಕ್ಕೆ ತಿರುಗಿಬಿದ್ದ HDK; ವಚನ ಭ್ರಷ್ಟ ಕಳಂಕದ ವಿರುದ್ಧ ಮತ್ತೆ ಗುಡುಗಿದ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣಿ ಎಂಬ ಶಾಸಕ ಜಮೀರ್ ಅಹ್ಮದ್ ಆರೋಪಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಯಾರನ್ನೋ ಮುಂದೆ ಬಿಟ್ಟು ನನ್ನ ವಿರುದ್ಧ ಆರೋಪಗಳನ್ನು ಮಾಡಿಸುತ್ತಿದ್ದಾರೆ. ಸಿದ್ದರಾಮಯ್ಯ ಒಳ ಸಂಚು ನಡೆಸಿ ಎಷ್ಟು ಸೂಟ್ ಕೇಸ್ ಪಡೆದಿದ್ದಾರೆ ? ಯಡಿಯೂರಪ್ಪ ಜೊತೆ ಸೇರಿಕೊಂಡು ಒಳಸಂಚು ಮಾಡಿದರು. 2008-2013ರಲ್ಲಿ ಉಪಚುನಾವಣೆಗಳು ನಡೆದವು. ಆಗ ಬಿಜೆಪಿ ಗೆಲುವಿನಲ್ಲಿ ಸಿದ್ದರಾಮಯ್ಯ ಪಾತ್ರ ದೊಡ್ಡದು ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಸಿದ್ದರಾಮಯ್ಯ ಕಾರಣ. ಬಿ ಎಸ್ ವೈ ಅವರಿಂದಲೇ ಸಿದ್ದರಾಮಯ್ಯ ಹಣ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

BREAKING: ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಭಾರೀ ಸ್ಫೋಟ; ಮಹಿಳೆ ಸೇರಿದಂತೆ 7 ಮಂದಿಗೆ ಗಂಭೀರ ಗಾಯ

ಇದೇ ವೇಳೆ ವಚನ ಭ್ರಷ್ಟ ಕಳಂಕದ ವಿರುದ್ಧ ಗುಡುಗಿದ ಕುಮಾರಸ್ವಾಮಿ, 20-20 ಸರ್ಕಾರದ ವೇಳೆ ಅಧಿಕಾರ ಹಸ್ತಾಂತರಕ್ಕೆ ನಾನು ಮುಂದಾಗಿದ್ದೆ. ಆದರೆ ಬಿಜೆಪಿಯಲ್ಲಿನ ಕೆಲ ನಾಯಕರೇ ಯಡಿಯೂರಪ್ಪನವರಿಗೆ ಅಧಿಕಾರ ಹಸ್ತಾಂತರ ಮಾಡದಂತೆ ವಾತಾವರಣ ಸೃಷ್ಟಿ ಮಾಡಿ ನನ್ನನ್ನು ತಡೆದರು. ನಾನು ವಚನ ಭ್ರಷ್ಟ ಅಲ್ಲ. ಬಿಜೆಪಿ ಜೊತೆ ಸರ್ಕಾರ ರಚನೆಗೆ ಸಿದ್ದರಾಮಯ್ಯ ಕೂಡ ಕಾರಣರಾಗಿದ್ದರು. ಇವರಿವರೇ ಒಳಸಂಚು ನಡೆಸಿ ಈಗ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನು ಜೆಡಿಎಸ್ ಕುಟುಂಬ ರಾಜಕಾರಣ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಮ್ಮದು ಕುಟುಂಬ ರಾಜಕಾರಣ ಎನ್ನುವುದಾದರೆ ಸಿದ್ದರಾಮಯ್ಯನವರದ್ದು ಏನು? ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಬೇರೆ ಯಾರೂ ನಾಯಕರಿರಲಿಲ್ಲವೇ? ತಮ್ಮ ಪುತ್ರನನ್ನು ಏಕೆ ಸ್ಪರ್ಧೆಗೆ ಇಳಿಸಿದಿರಿ? ಇದು ಕುಟುಂಬ ರಾಜಕಾರಣವಲ್ಲವೇ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...