ಬೆಂಗಳೂರು: ಸ್ಯಾಂಟ್ರೋ ರವಿಗೆ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿದ್ದ ಹೆಚ್.ಎಸ್. ದೇವರಾಜ್ ಅವರನ್ನು ಸರ್ಕಾರ ಎತ್ತಂಗಡಿ ಮಾಡಿದೆ.
ಹೊಸ ಕುಮಾರಕೃಪಾ ಗೆಸ್ಟ್ ಹೌಸ್ ವ್ಯವಸ್ಥಾಪಕರಾಗಿ ಹೋಟೆಲ್ ಮಯೂರ ವ್ಯಾಲಿ ವ್ಯೂ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಣ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಆದೇಶ ಹೊರಡಿಸಿದೆ.