alex Certify BIG NEWS: ಸ್ವರ ಭಾಸ್ಕರ್ ಗೆ ಅನಾಮಧೇಯನಿಂದ ಜೀವ ಬೆದರಿಕೆ ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ವರ ಭಾಸ್ಕರ್ ಗೆ ಅನಾಮಧೇಯನಿಂದ ಜೀವ ಬೆದರಿಕೆ ಪತ್ರ

ಸಲ್ಮಾನ್ ಖಾನ್ ನಂತರ ಇದೀಗ ನಟಿ ಸ್ವರ ಭಾಸ್ಕರ್ ಅವರಿಗೆ ಜೀವ ಬೆದರಿಕೆ ಒಡ್ಡಿದ ಪತ್ರವೊಂದು ಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬ ಸ್ವರ ಭಾಸ್ಕರ್ ಅವರ ಮುಂಬೈ ಮನೆಗೆ ಸ್ಪೀಡ್ ಪೋಸ್ಟ್ ಮೂಲಕ ಈ ಜೀವ ಬೆದರಿಕೆ ಪತ್ರವನ್ನು ಬರೆದಿದ್ದಾನೆ.

ಈ ಪತ್ರ ಬಂದ ಹಿನ್ನೆಲೆಯಲ್ಲಿ ನಟಿಯು ವರ್ಸೊವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದರನ್ವಯ ಅನಾಮಧೇಯ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬೆದರಿಕೆ ಪತ್ರವನ್ನು ಹಿಂದಿ ಭಾಷೆಯಲ್ಲಿ ಬರೆದಿದ್ದು, ವೀರ ಸಾವರ್ಕರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದರ ಬಗ್ಗೆ ಎಚ್ಚರಿಕೆ ನೀಡಿರುವುದಲ್ಲದೇ, ಜೀವ ತೆಗೆಯುವುದಾಗಿಯೂ ಎಚ್ಚರಿಕೆ ನೀಡಲಾಗಿದೆ.

ಈ ಪತ್ರದ ಕಡೆಯಲ್ಲಿ ಈ ದೇಶದ ನವ ಜವಾನ ಎಂದು ಸಹಿ ಹಾಕಲಾಗಿದೆ. ವೀರ ಸಾವರ್ಕರ್ ಅವರಿಗೆ ಅವಮಾನ ಮಾಡುವುದನ್ನು ಈ ದೇಶದ ಯುವ ಜನಾಂಗ ಸಹಿಸುವುದಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

2017 ರಲ್ಲಿ ಟ್ವೀಟ್ ಮಾಡಿದ್ದ ಸ್ವರ ಭಾಸ್ಕರ್ ಅವರು, ಸಾವರ್ಕರ್ ಅವರು ಬ್ರಿಟಿಷರ ಬಳಿ ಕ್ಷಮೆ ಯಾಚನೆ ಮಾಡಿದ್ದರು ಮತ್ತು ಜೈಲಿನಿಂದ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರು. ಇದು ನಿಜವಾದ ವೀರತನ ಅಲ್ಲ ಎಂದು ಟೀಕಿಸಿದ್ದರು. ಇದೇ ರೀತಿ 2019 ರಲ್ಲಿಯೂ ಸಾಮಾಜಿಕ ಮಾಧ್ಯಮದಲ್ಲಿ ಸ್ವರ ಭಾಸ್ಕರ್ ಟೀಕೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...