alex Certify BIG NEWS: ಹಲಾಲ್ ವಿವಾದ; ಸಿಎಂ ಬೊಮ್ಮಾಯಿ ನೀಡಿದ ಪ್ರತಿಕ್ರಿಯೆಯೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಲಾಲ್ ವಿವಾದ; ಸಿಎಂ ಬೊಮ್ಮಾಯಿ ನೀಡಿದ ಪ್ರತಿಕ್ರಿಯೆಯೇನು…?

ಬೆಂಗಳೂರು: ರಾಜ್ಯದಲ್ಲಿ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಈವರೆಗೆ ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗಿಲ್ಲ. ಇನ್ಮುಂದೆಯೂ ಆಗಲ್ಲ ಎಂದು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಈವರೆಗೆ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗಿಲ್ಲ, ಮುಂದೆಯೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಹೇಳಿದರು.

ಇದೇ ವೇಳೆ ರಾಜ್ಯದಲ್ಲಿ ಹಲಾಲ್ ವಿರುದ್ಧ ಅಭಿಯಾನ ಆರಂಭವಾಗಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಯಾವುದಕ್ಕೆ ಪ್ರತಿಕ್ರಿಯೆ ಕೊಡಬೇಕೋ ಅದಕ್ಕೆ ಕೊಡುತ್ತೇವೆ. ಯಾವುದಕ್ಕೆ ಪ್ರತಿಕ್ರಿಯೆ ಕೊಡಬೇಕು, ಯಾವುದಕ್ಕೆ ಕೊಡಬಾರದು ಎಂಬುದು ಗೊತ್ತಿದೆ. ನಮ್ಮ ಸರ್ಕಾರದ ನಿಲುವು ಏನು ಎಂದು ಮುಂದೆ ತಿಳಿಸುತ್ತೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...