alex Certify BIG NEWS: ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದ ಬಿಜೆಪಿಯನ್ನು ಮುಂಬಾಗಿಲಿಂದ ಓಡಿಸೋಣ; ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದ ಬಿಜೆಪಿಯನ್ನು ಮುಂಬಾಗಿಲಿಂದ ಓಡಿಸೋಣ; ಸಿದ್ದರಾಮಯ್ಯ ವಾಗ್ದಾಳಿ

ಮಂಡ್ಯ: ನಾವು ಯಾರಿಂದಲೂ ಛೀ ಥೂ ಎಂದು ಉಗಿಸಿಕೊಂಡು ಅಧಿಕಾರ ನಡೆಸಿಲ್ಲ. ಜನರು ಆಶಿರ್ವಾದ ಮಾಡಿದ್ದರಿಂದಲೆ 5 ವರ್ಷ ಉತ್ತಮ ಆಡಳಿತ ನಡೆಸಿದ್ದೆವು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾವು ಅಧಿಕಾರದಲ್ಲಿದ್ದಾಗ 158 ಭರವಸೆಗಳನ್ನು ಈಡೇರಿಸಿದ್ದೇವೆ. ಅದನ್ನೂ ಮೀರಿ 30ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಎಲ್ಲಾ ಜಾತಿಯ ಬಡವರಿಗೂ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಕೆಲ ಜಾತಿಗಳಿಗೆ ಮಾತ್ರ ಸೀಮಿತವಾಗಿ ಅಧಿಕಾರ ಮಾಡಲಿಲ್ಲ. ಆದರೆ ಈಗ ಬಿಜೆಪಿಯವರು ಎಲ್ಲವನ್ನು ಹಾಳು ಮಾಡುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕೆಂಡ ಕಾರಿದರು.

ರಾಜ್ಯದಲ್ಲಿ 2 ವರ್ಷಗಳಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಲ್ಲ. ವಿದ್ಯಾಸಿರಿ ಯೋಜನೆಯನ್ನು ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಿದೆ. ಎಸ್ ಸಿ, ಎಸ್ ಟಿ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ? ಬಿಜೆಪಿಯವರು ಅಧಿಕಾರಕ್ಕೆ ಬಂದಿರುವುದು ಹಿಂಬಾಗಿಲಿನಿಂದ. ಹಿಂಬಾಗಿಲಿನಿಂದ ಬಂದಿದ್ದಾರೆ. ಅವರನ್ನು ಮುಂಬಾಗಿಲಿಂದ ಓಡಿಸೋಣ. ನಾವು ಅಧಿಕಾರಕ್ಕೆ ಬಂದರೆ ಜನಪರ ಕೆಲಸ ಮಾಡುತ್ತೇವೆ. ಮೈಶುಗರ್ ಕಾರ್ಖಾನೆ ಪುನರಾರಂಭ ಮಾಡುತ್ತೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...