alex Certify BIG NEWS: ಹೆಚ್.ಆರ್.ಶ್ರೀನಾಥ್ ಗೆ ’ಕೈ’ ತಪ್ಪಿದ ಟಿಕೆಟ್; ಜನಾರ್ಧನ ರೆಡ್ಡಿಯಿಂದ ಕಾಂಗ್ರೆಸ್ ನಾಯಕನ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಚ್.ಆರ್.ಶ್ರೀನಾಥ್ ಗೆ ’ಕೈ’ ತಪ್ಪಿದ ಟಿಕೆಟ್; ಜನಾರ್ಧನ ರೆಡ್ಡಿಯಿಂದ ಕಾಂಗ್ರೆಸ್ ನಾಯಕನ ಭೇಟಿ

ಕೊಪ್ಪಳ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ವಂಚಿತರಾದ ನಾಯಕರು ಬೇರೆ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ಹೆಚ್.ಆರ್.ಶ್ರೀನಾಥ್ ಅವರನ್ನು ಮಾಜಿ ಸಚಿವ, ಕೆ ಆರ್ ಪಿ ಪಿ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಭೇಟಿಯಾಗಿದ್ದಾರೆ.

ಹೆಚ್.ಆರ್.ಶ್ರೀನಾಥ್ ಮನೆಗೆ ಭೇಟಿ ನೀಡಿದ ಜನಾರ್ಧನ ರೆಡ್ಡಿ, ತಮ್ಮ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ಗಂಗಾವತಿಯಿಂದ ಕಾಂಗ್ರೆಸ್ ಇಕ್ಬಾಲ್ ಅನ್ಸಾರಿಗೆ ಟಿಕೆಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಶ್ರೀನಾಥ್ ಅವರಿಗೆ ಟಿಕೆಟ್ ಕೈ ತಪ್ಪಿದೆ.

ಇದರ ಬೆನ್ನಲ್ಲೇ ಶ್ರೀನಾಥ್ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಸಿಡಿದೆದಿದ್ದರು. ಇದೀಗ ನಿನ್ನೆ ಬಿಜೆಪಿ ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ್ ದಡೇಸೂಗೂರು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ ಜನಾರ್ಧನ ರೆಡ್ಡಿ ಕೂಡ ಶ್ರೀನಾಥ್ ಭೇಟಿಯಾಗಿ ತಮ್ಮ ಪಕ್ಷಕ್ಕೆ ಸೆಳೆಯುವ ನಿಟ್ಟಿನಲ್ಲಿ ಚರ್ಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...