alex Certify BIG NEWS: ಹೆಚ್.ಡಿ.ಕೆ.-ಸಿದ್ದರಾಮಯ್ಯ ನಡುವೆ ಸುಳ್ಳಿನ ಸಮರ; ಸುಳ್ಳು ಹೇಳುವುದಕ್ಕೂ ಇತಿಮಿತಿ ಇರಬೇಕು; ವಿಪಕ್ಷ ನಾಯಕನಿಗೆ ಮಾಜಿ ಸಿಎಂ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಚ್.ಡಿ.ಕೆ.-ಸಿದ್ದರಾಮಯ್ಯ ನಡುವೆ ಸುಳ್ಳಿನ ಸಮರ; ಸುಳ್ಳು ಹೇಳುವುದಕ್ಕೂ ಇತಿಮಿತಿ ಇರಬೇಕು; ವಿಪಕ್ಷ ನಾಯಕನಿಗೆ ಮಾಜಿ ಸಿಎಂ ತಿರುಗೇಟು

ರಾಮನಗರ: ಜಾತಿ ಗಣತಿ ವರದಿ ಬಿಡುಗಡೆ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವಿನ ಸಮರ ಮುಂದುವರೆದಿದ್ದು, ಸಿದ್ದರಾಮಯ್ಯನವರ ಸುಳ್ಳಿಗೂ ಇತಿಮಿತಿ ಇರಬೇಕು ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಜಾತಿ ಗಣತಿ ವರದಿ ಬಿಡುಗಡೆಗೆ ಕುಮಾರಸ್ವಾಮಿ ಬೆದರಿಕೆ ಇತ್ತು. ಅವರ ಮೇಲಿನ ಹೆದರಿಕೆಯಿಂದಲೇ ಅಂದು ಸಚಿವ ಪುಟ್ಟರಂಗಶೆಟ್ಟಿ ಸಮೀಕ್ಷೆ ಬಿಡುಗಡೆ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರಾಮನಗರದಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಜಾತಿ ಗಣತಿ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿ ಚರ್ಚೆ ನಡೆಸಬೇಕಿತ್ತು. ಜನರಿಗೆ ಸತ್ಯಾಂಶವನ್ನು ತಿಳಿಸಬಹುದಿತ್ತು. ಅದನ್ನು ಬಿಟ್ಟು ಸಿದ್ದರಾಮಯ್ಯ ಸದನದ ಹೊರಗೆ ಬೀದಿಯಲ್ಲಿ ಹೇಳಿಕೆಗಳನ್ನು ನೀಡುತ್ತಾ ಅನಗತ್ಯವಾಗಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ.

PF ಖಾತೆಗೆ ‘ಆಧಾರ್’ ಲಿಂಕ್ ಮಾಡಿಲ್ವಾ…? ಹಾಗಾದ್ರೆ ಈ ಸುದ್ದಿ ಓದಿ

ಹತ್ತು ದಿನಗಳ ಕಾಲ ನಡೆದ ಅಧಿವೇಶನದಲ್ಲಿ ಇವರು ಸದನದಲ್ಲಿ ನಡೆದುಕೊಂಡಿದ್ದು ಹೇಗೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ನಾನು ಜಾತಿ ಗಣತಿ ಬಿಡುಗಡೆಗೆ ತಡೆದೆ ಎನ್ನುವುದಾದರೆ ಅದನ್ನು ಸದನದಲ್ಲಿ ಪ್ರಸ್ತಾಪ ಮಾಡಬೇಕಾಗಿತ್ತು. ಸುಳ್ಳು ಹೇಳುವುದಕ್ಕೂ ಕೂಡ ಇತಿಮಿತಿ ಇರಬೇಕು. ಸಿದ್ದರಾಮಯ್ಯ ಪ್ರಚಾರಕ್ಕಾಗಿ ಜಾತಿ ಗಣತಿ ಹೇಳಿಕೆಗಳನ್ನು ನೀಡುತ್ತಾ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಪ್ರತಿದಿನ ನನ್ನ ಹೆಸರನ್ನು ಕೆದಕಲಿಲ್ಲ ಎಂದರೆ ಸಿದ್ದರಾಮಯ್ಯನವರಿಗೆ ನಿದ್ದೆ ಬರಲ್ಲ ಅನಿಸುತ್ತೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...