![](https://kannadadunia.com/wp-content/uploads/2022/10/a-2022-05-09T171306.174-1024x536.jpg)
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಧನಂಜಯ್, ಹೆಡ್ ಬುಷ್ ಚಿತ್ರದಲ್ಲಿ ಕರಗದ ಬಗ್ಗೆ ಇರುವ ವಿವಾದಿತ ಸಂಭಾಷಣೆಗೆ ಬೀಪ್ ಹಾಕಲು ಚಿತ್ರತಂಡ ನಿರ್ಧರಿಸಿದೆ. ವಿವಾದವನ್ನು ಇಲ್ಲಿಗೆ ನಿಲ್ಲಿಸೋಣ. ಮತ್ತೆ ಕೆಲಸ ಮಾಡೋಣ. ಯಾರಿಗೆ ನೋವಾಗಿದ್ದರೂ ಕ್ಷಮೆ ಇರಲಿ ಎಂದು ಹೇಳಿದ್ದಾರೆ.
ನಟ ಧನಂಜಯ್ ಅಭಿನಯದ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕಲಾವಿದರನ್ನು ಅವಮಾನ ಮಾಡಲಾಗಿದೆ. ಕರಗದ ಬಗ್ಗೆ ಆಕ್ಷೇಪಾರ್ಹ ಸಂಭಾಷಣೆಗಳಿವೆ ಎಂದು ಹಲವರು ಚಿತ್ರ ಬಿಡುಗಡೆಗೆ ನಿರ್ಬಂಧಿಸುವಂತೆ ಒತ್ತಾಯಿಸಿದ್ದರು. ವಿವಾದ ಫಿಲ್ಮ್ ಚೇಂಬರ್ ಮೆಟ್ಟಿಲೇರಿತ್ತು. ಇದೀಗ ವಿವಾದಿತ ಸಂಭಾಷಣೆಗೆ ಬೀಪ್ ಮಾಡಲು ತೀರ್ಮಾನಿಸಲಾಗಿದ್ದು, ವಿವಾದ ಬಗೆಹರಿದಿದೆ ಎನ್ನಲಾಗಿದೆ.