alex Certify BIG NEWS: ‘ಹೆಬ್ಬೆಟ್ಟು ಗಿರಾಕಿ’ ಬಿಜೆಪಿ ಹೇಳಿಕೆಗೆ ಖಡಕ್ ತಿರುಗೇಟು ಕೊಟ್ಟ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಹೆಬ್ಬೆಟ್ಟು ಗಿರಾಕಿ’ ಬಿಜೆಪಿ ಹೇಳಿಕೆಗೆ ಖಡಕ್ ತಿರುಗೇಟು ಕೊಟ್ಟ ಕಾಂಗ್ರೆಸ್

ಬೆಂಗಳೂರು: ‘ಹೆಬ್ಬಟ್ಟು ಗಿರಾಕಿ’ ಎಂಬ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್, ಜನರ ಕಷ್ಟಗಳನ್ನು ತಿಳಿಯದ ‘ಹೆಬ್ಬೆಟ್ ಗಿರಾಕಿ ಮೋದಿ’ಯಿಂದ ದೇಶ ನಲುಗುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರು ಹೇಳದೇ ಪರೋಕ್ಷವಾಗಿ ಟೀಕಿಸಿದ್ದ ಬಿಜೆಪಿ ಸರಣಿ ಟ್ವೀಟ್ ಮೂಲಕ ಕಿಡಿಕಾರಿತ್ತು. ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದಾರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ ’ಹೆಬ್ಬೆಟ್ಟು’ ಗಿರಾಕಿ ಕನಸು ಕಾಣುತ್ತಿದ್ದಾನೆ. ಸಿದ್ದರಾಮಯ್ಯನವರೇ ಆತನ ಯೋಗ್ಯತೆ, ಅರ್ಹತೆ ಏನು? ಎಂದು ವಿಚಾರಿಸಿ ಎಂದು ಟೀಕಿಸಿತ್ತು.

BIG NEWS: ತರಾತುರಿಯಲ್ಲೇ ಬೆಂಗಳೂರು ಸಿಟಿ ರೌಂಡ್ಸ್ ಮುಗಿಸಿದ ಸಿಎಂ ಬೊಮ್ಮಾಯಿ

ಬಿಜೆಪಿ ಟ್ವೀಟ್ ಗೆ ಇಂದು ಟ್ವಿಟರ್ ನಲ್ಲೇ ತಿರುಗೇಟು ನೀಡಿರುವ ರಾಜ್ಯ ಕಾಂಗ್ರೆಸ್ ಘಟಕ, ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇಂದು ಪೆಟ್ರೋಲ್ 66, ಡೀಸೆಲ್ 55 ರೂಪಾಯಿಗೆ ದೊರಕುತ್ತಿತ್ತು. ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಕೇಂದ್ರ ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ ಎಂದಿದೆ.

ಜನರ ಕಷ್ಟಗಳನ್ನು ತಿಳಿಯದ ಹೆಬ್ಬೆಟ್ ಗಿರಾಕಿ ಮೋದಿಯಿಂದ ದೇಶ ನಲುಗಿ ಹೋಗುತ್ತಿದೆ ಎಂದು ಚಾಟಿ ಬೀಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...