alex Certify BIG NEWS: ಹೊನ್ನಾಳಿಯ ರೇಣುಕಾಚಾರ್ಯ ಮನೆಗೆ ಬಂದ ಯಡಿಯೂರಪ್ಪ; BSY ಕಂಡು ಕಣ್ಣೀರಾದ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊನ್ನಾಳಿಯ ರೇಣುಕಾಚಾರ್ಯ ಮನೆಗೆ ಬಂದ ಯಡಿಯೂರಪ್ಪ; BSY ಕಂಡು ಕಣ್ಣೀರಾದ ಶಾಸಕ

ದಾವಣಗೆರೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮನೆಗೆ ಭೇಟಿ ನೀಡಿದ್ದು, ಮಾಜಿ ಸಿಎಂ ಅವರನ್ನು ಕಂಡು ರೇಣುಕಾಚಾರ್ಯ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ, ಕೆಲ ಕಾಲ ಚರ್ಚೆ ನಡೆಸಿದರು. ಈ ವೇಳೆ ಯಡಿಯೂರಪ್ಪನವರ ಆಡಳಿತ ವೈಖರಿ ನೆನೆದು ರೇಣುಕಾಚಾರ್ಯ ಭಾವುಕರಾದರು.

ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ. ಆದರೆ ಪಕ್ಷ ಸಂಘಟನೆ ಮಾಡಲ್ಲ ಎಂದಿಲ್ಲ. ಇದೊಂದು ಬಾರಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬುದು ಎಲ್ಲಾ ಶಾಸಕರ ಕೋರಿಕೆ. ಒಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಮನವಿ ಮಾಡಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ, ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಪಕ್ಷವೇ ಅಧಿಕಾರಕ್ಕೆ ಬರಲ್ಲ, ಇನ್ನು ಸಿಎಂ ಆಗಲು ಸಾಧ್ಯವೇ ಇಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...