alex Certify BIG NEWS: ಹ್ಯಾಕರ್ ಶ್ರೀಕೃಷ್ಣ 14 ದಿನ ನ್ಯಾಯಾಂಗ ಬಂಧನಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹ್ಯಾಕರ್ ಶ್ರೀಕೃಷ್ಣ 14 ದಿನ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಬಿಟ್ ಕಾಯಿನ್ ದಂಧೆ ಆರೋಪಿ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಮೆಟ್ರೋಪಾಲಿಟನ್ ಸಂಚಾರಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಹೋಟೆಲ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾಕರ್ ಶ್ರೀಕೃಷ್ಣ ಹಾಗೂ ಆತನ ಸ್ನೇಹಿತನನ್ನು ನ.6ರಂದು ಜೀವನ್ ಭೀಮಾನಗರ ಠಾಣೆ ಪೊಲಿಸರು ಬಂಧಿಸಿದ್ದರು.

ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಸಂಚಾರಿ ನ್ಯಾಯಾಲಯ-1 ನವೆಂಬರ್ 22ರವರೆಗೆ ಆರೋಪಿ ಶ್ರೀಕೃಷ್ಣನನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದೆ.

ಬಿಟ್ ಕಾಯಿನ್ ಪ್ರಕರಣ ಹಾಗೂ ಹ್ಯಾಕಿಂಗ್ ಪ್ರಕರಣದಲ್ಲಿ ಈ ಹಿಂದೆ ಬಂಧನಕ್ಕೀಡಾಗಿದ್ದ ಆರೋಪಿ ಶ್ರೀಕೃಷ್ಣ ಎರಡು ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಏರ್ ಪೋರ್ಟ್ ಬಳಿಯ ಐಷಾರಾಮಿ ಹೋಟೆಲ್ ನಲ್ಲಿ ರೂಮ್ ಬುಕ್ ಮಾಡಿ ತಂಗಿದ್ದ ಶ್ರೀಕೃಷ್ಣ ಹಾಗೂ ಆತನ ಸ್ನೇಹಿತ ವಿಷ್ಣು ಭಟ್ ಇಬ್ಬರನ್ನು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಬಂಧಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...