alex Certify BIG NEWS: 2023ರ ಚುನಾವಣೆ ನಮಗೆ ಕೊನೇ ಚುನಾವಣೆ; ನಿಖಿಲ್ ಕುಮಾರಸ್ವಾಮಿ ಅಚ್ಚರಿ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2023ರ ಚುನಾವಣೆ ನಮಗೆ ಕೊನೇ ಚುನಾವಣೆ; ನಿಖಿಲ್ ಕುಮಾರಸ್ವಾಮಿ ಅಚ್ಚರಿ ಹೇಳಿಕೆ

ಕುಣಿಗಲ್: ಮುಂಬರುವ ವಿಧಾನಸಭಾ ಚುನಾವಣೆ ಜೆ ಡಿ ಎಸ್ ಗೆ ಒಂದು ರೀತಿಯಲ್ಲಿ ಕೊನೆ ಚುನಾವಣೆ ಎಂದು ಹೇಳುವ ಮೂಲಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ಅಂಚೆಪಾಳ್ಯ ಕ್ರಾಸ್ ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಇದು ಕಷ್ಟಗಳು ಕಳೆಯುವಂತಹ ಚುನಾವಣೆಯಾಗಬೇಕು. 2023ರ ಚುನಾವಣೆ ಒಂದು ರೀತಿ ನಮ್ಮ ಪಾಲಿಗೆ ಕೊನೇ ಚುನಾವಣೆ. ಇಲ್ಲಿಂದ ಹೊಸ ಅಧ್ಯಾಯ ಆರಂಭವಾಗಲಿದೆ ಎಂದರು.

ಮುಂದಿನ 25 ವರ್ಷಗಳ ಕಾಲ ನಮ್ಮದೇ ಪಾರುಪತ್ಯ ಇರುತ್ತದೆ. ದೇವೇಗೌಡರು ಕಳೆದ ಎರಡು ಮೂರು ತಿಂಗಳಿಂದ ಅನಾರೋಗ್ಯದ ಕಾರಣಕ್ಕೆ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಇನ್ನು ನೂರು ವರ್ಷಗಳ ಕಾಲ ಅವರು ನಮ್ಮ ಜೊತೆ ಇರುತ್ತಾರೆ. ಕುಮಾರಸ್ವಾಮಿಯವರನ್ನು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಆ ನಿಟ್ಟಿನಲ್ಲಿ ಪಕ್ಷ ಸಂಘಟನೆ ಕಾರ್ಯಕರ್ತರು ಶ್ರಮಿಸಬೇಕು. ರಾಜ್ಯದ ಜನರ ಹಿತಕ್ಕಾಗಿ ಜೆಡಿಎಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...