alex Certify BIG NEWS: 5 ವರ್ಷ ಸಿಎಂ ಆಗಿದ್ದರೂ ಸ್ವಂತ ನೆಲೆ ಇಲ್ಲದೇ ಅಲೆದಾಡುತ್ತಿದ್ದಾರೆ; ಸಿದ್ದರಾಮಯ್ಯ ಸೋಲಿಸಲು ಪಕ್ಷದಿಂದಲೇ ಖೆಡ್ಡಾ ರೆಡಿಯಾಗಿದೆ; ವೈ.ಎ.ನಾರಾಯಣಸ್ವಾಮಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 5 ವರ್ಷ ಸಿಎಂ ಆಗಿದ್ದರೂ ಸ್ವಂತ ನೆಲೆ ಇಲ್ಲದೇ ಅಲೆದಾಡುತ್ತಿದ್ದಾರೆ; ಸಿದ್ದರಾಮಯ್ಯ ಸೋಲಿಸಲು ಪಕ್ಷದಿಂದಲೇ ಖೆಡ್ಡಾ ರೆಡಿಯಾಗಿದೆ; ವೈ.ಎ.ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಚಿಕ್ಕನಾಯಕನ ಹಳ್ಳಿಯಲ್ಲಿ ಮಾಧುಸ್ವಾಮಿ ವಿರುದ್ಧ ನಿಲ್ಲಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಕಷ್ಟ ಕಾಲದಲ್ಲಿ ಬಾದಾಮಿ ಜನತೆ ಕೈ ಹಿಡಿದರು. ಆದರೆ ಈಗ ಅಲ್ಲಿನ ಜನರಿಗೆ ಮೋಸ ಮಾಡಿ ಕೋಲಾರದತ್ತ ಮುಖ ಮಾಡಿದ್ದಾರೆ. 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದವರು ಸ್ವಂತ ನೆಲೆ ಇಲ್ಲದೇ ಕ್ಷೇತ್ರಕ್ಕಾಗಿ ಅಲೆದಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿದರೆ ಅವರನ್ನು ಸೋಲಿಸಲು ಖೆಡ್ಡಾ ರೆಡಿಯಾಗಿದೆ. ಸ್ವಪಕ್ಷದ ನಾಯಕರಾದ ರಮೇಶ್ ಕುಮಾರ್ ಸೇರಿದಂತೆ ಹಲವರು ಸಿದ್ದರಾಮಯ್ಯ ಸೋಲಿಸಲು ಖೆಡ್ಡಾ ಸಿದ್ಧಗೊಳಿಸಿದ್ದಾರೆ. ಸಿದ್ದರಾಮಯ್ಯ ಸೋಲು ಖಚಿತ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...