alex Certify BIG NEWS : ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ 5 ಲಕ್ಷ ಪರಿಹಾರ : DCM ಡಿಕೆ ಶಿವಕುಮಾರ್ ಘೋಷಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ 5 ಲಕ್ಷ ಪರಿಹಾರ : DCM ಡಿಕೆ ಶಿವಕುಮಾರ್ ಘೋಷಣೆ.!

ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಆಟವಾಡುವಾಗ ಅಣ್ಣ, ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.ವರ್ಷಾ ಲೇಔಟ್ ನ ಜಯಮ್ಮ ಎಂಬುವರ ಮಕ್ಕಳಾದ ಜಾನ್ಸನ್(13), ಮಹಾಲಕ್ಷ್ಮಿ(11) ಕೆರೆಗೆ ಬಿದ್ದು ಮೃತಪಟ್ಟ ಅಣ್ಣ, ತಂಗಿಯಾಗಿದ್ದಾರೆ. ಕಳೆದ ಸೋಮವಾರ ಸಂಜೆ 5:30ಕ್ಕೆ ಕೆಂಗೇರಿ ಬಸ್ ನಿಲ್ದಾಣ ಎದುರಿನ ಕೆರೆಯಲ್ಲಿ ಘಟನೆ ನಡೆದಿದೆ.

ಜಾನ್ಸನ್ ಮತ್ತು ಮಹಾಲಕ್ಷ್ಮಿ ಕೆರೆಯ ವಾಕಿಂಗ್ ಪಾತ್ ನಲ್ಲಿ ಆಟವಾಡುತ್ತಿದ್ದಾಗ ಕೆರೆಗೆ ಬಿದ್ದ ಬಿಂದಿಗೆ ಎತ್ತಿಕೊಳ್ಳಲು ಮಹಾಲಕ್ಷ್ಮಿ ಕೆಳಗೆ ಇಳಿದಿದ್ದು, ಆಯತಪ್ಪ ನೀರಲ್ಲಿ ಬಿದ್ದಿದ್ದಾಳೆ. ತಂಗಿ ಮುಳುಗುವುದನ್ನು ಕಂಡ ಜಾನ್ಸನ್ ಕೂಡ ರಕ್ಷಣೆಗೆ ಮುಂದಾಗಿದ್ದು, ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.ಮಾಹಿತಿ ತಿಳಿದ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟ ನಡೆಸಿದ್ದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...