alex Certify BIG NEWS : ಕಲ್ಲಕುರಿಚಿ ಕಳ್ಳಭಟ್ಟಿ ದುರಂತದಲ್ಲಿ 56 ಮಂದಿ ಸಾವು ; ಏಳು ಮಂದಿ ಅರೆಸ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕಲ್ಲಕುರಿಚಿ ಕಳ್ಳಭಟ್ಟಿ ದುರಂತದಲ್ಲಿ 56 ಮಂದಿ ಸಾವು ; ಏಳು ಮಂದಿ ಅರೆಸ್ಟ್..!

ಕಲ್ಲಕುರಿಚಿ : ಕಲ್ಲಕುರಿಚಿ ಕಳ್ಳಭಟ್ಟಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ 53 ಕ್ಕೆ ಏರಿದ್ದು, ಕಠಿಣ ಕ್ರಮಕ್ಕೆ ಸಿಎಂ ಸ್ಟಾಲಿನ್ ಆಗ್ರಹಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ಈವರೆಗೆ ಏಳು ಜನರನ್ನು ಬಂಧಿಸಿದ್ದಾರೆ.ತಮಿಳುನಾಡು ಆರೋಗ್ಯ ಸಚಿವ ಸುಬ್ರಮಣಿಯನ್ ಮಾ ಅವರು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಕಳ್ಳಭಟ್ಟಿ ದುರಂತದಲ್ಲಿ ಸಂತ್ರಸ್ತರನ್ನು ಭೇಟಿಯಾದರು ಮತ್ತು ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ವಿಚಾರಿಸಿದರು.

“ಇಲ್ಲಿಯವರೆಗೆ 185 ಜನರನ್ನು ನಾಲ್ಕು ಆಸ್ಪತ್ರೆಗಳು, ಕಲ್ಲಕುರಿಚಿ ಆಸ್ಪತ್ರೆ, ಪುದುಚೇರಿಯ ಜಿಪ್ಮರ್ ಆಸ್ಪತ್ರೆ, ಸೇಲಂ ಸರ್ಕಾರಿ ಆಸ್ಪತ್ರೆ ಮತ್ತು ವಿಲ್ಲುಪುರಂ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಈವರೆಗೆ 50 ಜನರು ಸಾವನ್ನಪ್ಪಿದ್ದಾರೆ. ನಮ್ಮ ಉನ್ನತ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಇಲ್ಲಿದ್ದಾರೆ ಮತ್ತು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ” ಎಂದು ಡಿಎಂಕೆ ನಾಯಕ ತಿಳಿಸಿದ್ದಾರೆ.

ಕಲ್ಲಕುರಿಚಿ ಕಳ್ಳಭಟ್ಟಿ ದುರಂತ

ಘಟನೆಯಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತ್ವರಿತ ಕ್ರಮ ಕೈಗೊಂಡಿದ್ದಾರೆ ಎಂದು ತಮಿಳುನಾಡು ಆರೋಗ್ಯ ಸಚಿವರು ಒತ್ತಿ ಹೇಳಿದರು. ಮೃತರ ಕುಟುಂಬಕ್ಕೆ ಸಿಎಂ 10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಆದರೆ ಕಲ್ಲಕುರುಚಿ ಹೂಚ್ ದುರಂತದಲ್ಲಿ ಪೋಷಕರಲ್ಲಿ ಒಬ್ಬರು ಅಥವಾ ಇಬ್ಬರನ್ನೂ ಕಳೆದುಕೊಂಡ ಮಕ್ಕಳ ಎಲ್ಲಾ ಶಿಕ್ಷಣ ಮತ್ತು ಹಾಸ್ಟೆಲ್ ಶುಲ್ಕವನ್ನು ರಾಜ್ಯ ಸರ್ಕಾರ ಭರಿಸುತ್ತದೆ ಎಂದು ಸ್ಟಾಲಿನ್ ಶುಕ್ರವಾರ ಹೇಳಿದ್ದಾರೆ.

ಕಲ್ಲಕುರಿಚಿ ಅಕ್ರಮ ಮದ್ಯ ದುರಂತದ ಬಗ್ಗೆ ಚರ್ಚೆ ನಡೆಸಬೇಕೆಂದು ಒತ್ತಾಯಿಸಿ ಎಐಎಡಿಎಂಕೆ ನಾಯಕರು ಘೋಷಣೆಗಳನ್ನು ಕೂಗಿದ್ದರಿಂದ ಚೆನ್ನೈನ ತಮಿಳುನಾಡು ವಿಧಾನಸಭೆಯಲ್ಲಿ ಶುಕ್ರವಾರ ಕೋಲಾಹಲ ಉಂಟಾಯಿತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...