alex Certify BIG NEWS : ಬಿಜೆಪಿಯಿಂದ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಕೋಮು ಗಲಬೆ ನಡೆಸುವ ʻಫತ್ವಾʼ ಬಂದಿದೆ : ಬಿ.ಕೆ. ಹರಿಪ್ರಸಾದ್ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬಿಜೆಪಿಯಿಂದ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಕೋಮು ಗಲಬೆ ನಡೆಸುವ ʻಫತ್ವಾʼ ಬಂದಿದೆ : ಬಿ.ಕೆ. ಹರಿಪ್ರಸಾದ್ ಹೊಸ ಬಾಂಬ್

ಬೆಂಗಳೂರು : ಬಿಜೆಪಿಯಿಂದ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಕೋಮು ಗಲಬೆ ನಡೆಸುವ ಫತ್ವಾ ಬಂದಿದೆ  ಎಂದು ಎಂಎಲ್‌ ಸಿ ಬಿ.ಕೆ. ಹರಿಪ್ರಸಾದ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಎಕ್ಸ್‌ ನಲ್ಲಿ ಸಾಕ್ಷಿ ಬಿಡುಗಡೆ ಮಾಡಿರುವ ಅವರು, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ ಎಂದಿದ್ದಾರೆ.

 ರೌಡಿ ಶೀಟರ್ ಆಗಿರುವ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಬೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ “ರಾಷ್ಟ್ರ ರಕ್ಷಣಾ ಪಡೆ” ಎಂಬ ವಾಟ್ಸಪ್ ಗ್ರೂಪಿನಲ್ಲಿ ಹೇಳಿಕೊಂಡಿದ್ದಾನೆ.ಕೋಮು ಗಲಭೆ ನಡೆಸಿ 2024ಕ್ಕೆ “ವಿಶ್ವಗುರುವನ್ನ” ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಎಲ್ಲಿ?ಯಾವಾಗಾ?ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಇಂತಹ ಸಮಾಜಘಾತುಕರಿಗೆ ಇಡಿ ಬಿಜೆಪಿಯೇ ಬೆಂಬಲಕ್ಕೆ ನಿಂತಿರುವುದು ಜಗಜ್ಜಾಹೀರು. ಕೂಡಲೇ ಸರ್ಕಾರ ಇಂತಹ ಭಯೋತ್ಪಾದಕ ಶಕ್ತಿಗಳನ್ನ ಮಟ್ಟ ಹಾಕಬೇಕು. ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿರುವವರ ಮೇಲೆ ರಾಷ್ಟ್ರದ್ರೋಹದ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...